Saturday, September 21, 2024
Saturday, September 21, 2024

ರಾ.ಹೆ 66 ರಲ್ಲಿ ಕಾಲು ಸೇತುವೆ ರಚನೆಗೆ ರೂ. 4.36 ಕೋಟಿ ಅನುದಾನ ಮಂಜೂರು: ಶೋಭಾ ಕರಂದ್ಲಾಜೆ

ರಾ.ಹೆ 66 ರಲ್ಲಿ ಕಾಲು ಸೇತುವೆ ರಚನೆಗೆ ರೂ. 4.36 ಕೋಟಿ ಅನುದಾನ ಮಂಜೂರು: ಶೋಭಾ ಕರಂದ್ಲಾಜೆ

Date:

ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಲವಾರು ಭಾಗಗಳಲ್ಲಿ ಕ್ರಾಸಿಂಗ್ ಗಳನ್ನು ನಿರ್ಮಾಣ ಮಾಡುವ ಅಗತ್ಯತೆ ಇದ್ದು ಈ ಕುರಿತು ಕೇಂದ್ರ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ವಿನಂತಿ ಮಾಡಲಾಗಿತ್ತು.

ಕೇಂದ್ರ ಭೂ ಸಾರಿಗೆ ಸಚಿವರು ಉಡುಪಿ ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ಒಟ್ಟು ರೂ. 4.36 ಕೋಟಿಗಳ ವೆಚ್ಚದಲ್ಲಿ ಪಾದಚಾರಿ ಕಾಲು ಸೇತುವೆಗಳನ್ನು ನಿರ್ಮಿಸಲು ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿರುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಕೆಳಗಿನ ಪ್ರದೇಶಗಳಲ್ಲಿ ಸ್ಟೀಲ್ ಕಾಲು ಸೇತುವೆ ನಿರ್ಮಾಣವಾಗಲಿದೆ.

1. ಬಡಾ ಎರ್ಮಾಳ್, ಕಾಪು ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿ)
2. ಆನೆಗುಡ್ಡೆ, ಕುಂದಾಪುರ ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿ)
3. ಮಹೇಶ್ ಆಸ್ಪತ್ರೆಯ ಬಳಿ, ಉಡುಪಿ ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿ)
4. ಅಂಬಾಗಿಲು, ಉಡುಪಿ ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿ)

ಜನ ಸಂಚಾರ ಹೆಚ್ಚಿರುವ ಈ ಮೇಲಿನ ಪ್ರದೇಶಗಳಲ್ಲಿ, ರಸ್ತೆಯನ್ನು ದಾಟಲು ಜನಸಾಮಾನ್ಯರಿಗೆ ಸಹಾಯವಾಗುವಂತೆ ಸ್ಟೀಲ್ ಪಾದಚಾರಿ ಕಾಲು ಸೇತುವೆಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿರುತ್ತದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಕೆಲಸ ಕಾರ್ಯಗಳು ಆರಂಭಗೊಳ್ಳಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!