Sunday, September 22, 2024
Sunday, September 22, 2024

ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ

ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ

Date:

ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಪೂನಾ ಮಾರ್ಗದಲ್ಲಿ ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 28 ರಿಂದ ಪುನಃ ಸಂಚಾರವನ್ನು ಪ್ರಾರಂಭಿಸಲಾಗುವುದು.

ಸಾರಿಗೆ ಕಾರ್ಯಾಚರಣೆಯ ವಿವರ: ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನಿಂದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಬೆಳಗಾವಿ, ಕರಾಡ, ಸತಾರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಪೂನಾ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 6.30 ಕ್ಕೆ ಪೂನಾದಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿದೆ.

ಉಡುಪಿಯಿಂದ ಹೈದ್ರಾಬಾದ್‌ಗೆ ಈಗಾಗಲೇ ರಾಜಹಂಸ ಸಾರಿಗೆಗಳನ್ನು ಪ್ರಾರಂಭಿಸಲಾಗಿದ್ದು, ಉಡುಪಿಯಿಂದ ಬೆಳಗ್ಗೆ 11.30 ಕ್ಕೆ ಹೊರಟು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹೊಸಪೇಟೆ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಹೈದ್ರಾಬಾದ್ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5.45 ಕ್ಕೆ ಹೈದ್ರಾಬಾದ್‌ನಿಂದ ಹೊರಟು ಮರುದಿನ ಬೆಳಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ.

ಈ ಸಾರಿಗೆಗಳಲ್ಲಿ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ http://www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!