Thursday, September 19, 2024
Thursday, September 19, 2024

ಕಲ್ಮತ್ ಮಸೀದಿ ಭೂ ಹಸ್ತಾಂತರ, ರದ್ದತಿಯಲ್ಲಿ ಹಸ್ತಕ್ಷೇಪ ಮಾಡಿಲ್ಲ: ಪ್ರಮೋದ್ ಮಧ್ವರಾಜ್

ಕಲ್ಮತ್ ಮಸೀದಿ ಭೂ ಹಸ್ತಾಂತರ, ರದ್ದತಿಯಲ್ಲಿ ಹಸ್ತಕ್ಷೇಪ ಮಾಡಿಲ್ಲ: ಪ್ರಮೋದ್ ಮಧ್ವರಾಜ್

Date:

ಕಲ್ಮತ್ ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಕಟಣೆಯ ಮೂಲಕ ಹೇಳಿಕೆಯನ್ನು ನೀಡಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿರುವ ನಗರಸಭಾ ವ್ಯಾಪ್ತಿಯ ಕೊಡವೂರು ಗ್ರಾಮದ ಸರಕಾರಿ ಜಾಗದ ಸರ್ವೇ ನಂ 53/6 ರಲ್ಲಿನ 67 ಸೆಂಟ್ಸ್ ಜಾಗವನ್ನು ನಾನು ಶಾಸಕನಾಗಿದ್ದಾಗ ವಕ್ಫ್ ಬೋರ್ಡ್ ಮುಖಾಂತರ ಕಲ್ಮತ್ ಮಸೀದಿ ಹೆಸರಿಗೆ ವರ್ಗಾಯಿಸಿದ್ದೇನೆ ಎನ್ನುವ ಆಪಾದನೆಯ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಸ್ಪಷ್ಟೀಕರಣ ನೀಡುವ ಸಲುವಾಗಿ ಪ್ರಕಟಣೆಯನ್ನು ನೀಡಿದ್ದಾರೆ.

ನಾನು ಶಾಸಕನಾಗಿರುವ ಸಂದರ್ಭದಲ್ಲಿ ಕ್ಷೇತ್ರದಲ್ಲಿರುವ ಎಲ್ಲಾ ಇಲಾಖೆಗಳಲ್ಲಿ ಸಮಸ್ಯೆಗಳನ್ನು ಅನುಭವಿಸುತ್ತಿರುವ ಜನಸಾಮಾನ್ಯರು ಸಮಸ್ಯೆ ಪರಿಹಾರಕ್ಕಾಗಿ ಮತ್ತು ಹೊಸ ಯೋಜನೆಗಳ ಅನುಷ್ಟಾನಕ್ಕಾಗಿ ಸಾವಿರಾರು ಅರ್ಜಿಗಳು ಬರುತ್ತವೆ ಅಂತಹ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಪರಿಶೀಲಿಸಿ ಕ್ರಮವಹಿಸುವಂತೆ ರವಾನಿಸುವುದು ಜನಪ್ರತಿನಿಧಿಗಳ ಜವಾಬ್ದಾರಿ.

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಯಾಗಿ ಜಾತಿ-ಮತ, ವರ್ಣ-ಭೇದ, ಧರ್ಮವನ್ನು ನೋಡಿ ಯಾವುದೇ ಅರ್ಜಿಗಳಲ್ಲಿ ತಾರತಮ್ಯ ಮಾಡದೇ  ಜವಾಬ್ದಾರಿಯನ್ನು ಶಾಸಕನಾಗಿ ನಿರ್ವಹಿಸಲೇಬೇಕು.ಕೊಡವೂರು ಗ್ರಾಮದಲ್ಲಿ ಕಲ್ಮತ್ ಮಸೀದಿಗೆ ಜಾಗದ ಹಸ್ತಾಂತರದ ಪ್ರಕ್ರಿಯೆಗಳು 2018 ರಲ್ಲಿ ನಡೆದಿರುವ ಬಗ್ಗೆ ಮಾಹಿತಿಯಿದ್ದು, ಮೇ ತಿಂಗಳಿನಲ್ಲಿ ಚುನಾವಣೆ ನಡೆದು ನಾನು ಸೋತು ಶಾಸಕ ಸ್ಥಾನದ ಅಧಿಕಾರವನ್ನು ಕಳೆದುಕೊಂಡಿದ್ದೆ ಎನ್ನುವುದು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿರುವವರು ಮರೆತಿರುವಂತಿದೆ. 2018 ರ ಬಳಿಕದ ಈ ಎಲ್ಲಾ ಸರಕಾರಿ ಪ್ರಕ್ರಿಯೆಗಳು ಸರಕಾರಿ ಇಲಾಖೆಗಳ ಮೂಲಕವೇ ಆಗಿದೆ ಎನ್ನುವುದು ಗಮನಿಸಬೇಕಾಗಿದೆ.

ನಾನು ನನ್ನ ಶಾಸಕತ್ವದ ಅವಧಿಯಲ್ಲಿ ಯಾವುದೇ ರೀತಿಯಲ್ಲಿ ಯಾವ ಜಾತಿ-ಧರ್ಮದ ರಾಜಕೀಯ ಮಾಡದೇ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಪಾಲಿಸಿದ್ದೇನೆ. ಈ ಜಾಗಕ್ಕೆ ಸಂಬಂಧಪಟ್ಟಂತೆ ವೈಯಕ್ತಿಕವಾಗಿ ನಾನು ಯಾವ ಇಲಾಖೆಯ ಅಧಿಕಾರಿಯನ್ನು ಸಂಪರ್ಕಿಸಿ ಚರ್ಚಿಸಿಲ್ಲ ಮತ್ತು ಯಾವ ಅಧಿಕಾರಿಗಳು ನನ್ನನ್ನು ಸಂಪರ್ಕಿಸಿಲ್ಲ ಎನ್ನುವುದನ್ನು ಎಲ್ಲರ ಗಮನಕ್ಕೆ ತರಲಿಚ್ಚಿಸುತ್ತೇನೆ.

ಈ ಭೂ ಹಸ್ತಾಂತರ ಮತ್ತು ರದ್ದತಿ ಪ್ರಕ್ರಿಯೆಗಳಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡದೇ ಇರುವುದನ್ನು ಮತ್ತೊಮ್ಮೆ ಈ ಮುಖೇನ ತಿಳಿಸಲಿಚ್ಚಿಸುತ್ತೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!