Monday, September 23, 2024
Monday, September 23, 2024

ಶಂಕರನಾರಾಯಣ: ಬೀಳ್ಕೊಡುಗೆ ಸಮಾರಂಭ

ಶಂಕರನಾರಾಯಣ: ಬೀಳ್ಕೊಡುಗೆ ಸಮಾರಂಭ

Date:

ಸಮೃದ್ಧಿ ಯುವಕ ಮಂಡಲ(ರಿ) ಕುಳ್ಳುಂಜೆ ಶಂಕರನಾರಾಯಣ ಇದರ ವತಿಯಿಂದ ಕರ್ನಾಟಕ ಬ್ಯಾಂಕ್ ಕುಳ್ಳುಂಜೆ ಶಾಖೆಯಲ್ಲಿ ಶಾಖಾ ಪ್ರಬಂಧಕರಾಗಿ ಸೇವೆ ಸಲ್ಲಿಸಿದ ಶಿವಪ್ರಸಾದ್‌ರವರಿಗೆ ಬೀಳ್ಕೊಡುಗೆ ಸಮಾರಂಭವು ಶ್ರೀ ಪಾತಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಸಮೃದ್ಧಿ ಯುವಕ ಮಂಡಲದ ಅಧ್ಯಕ್ಷರಾದ ರಾಘವೇಂದ್ರ ತಲ್ಲಂಜೆಯವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಕರ್ನಾಟಕ ಬ್ಯಾಂಕ್‌ನ ಪ್ರಬಂಧಕರಾದ ಶಿವಪ್ರಸಾದ್ ಗೌರವವನ್ನು ಸ್ವೀಕರಿಸಿ ತಮ್ಮ ಸೇವಾ ಅವಧಿಯ ಅನುಭವವನ್ನು ಹಂಚಿಕೊಂಡು ಬ್ಯಾಂಕಿನ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಮೃದ್ಧಿ ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ರಾಜೇಶ್ ಆಚಾರ್ಯ, ಪ್ರವೀಣ್ ನಾಯ್ಕ್ ಬಾಳೆಕೊಡ್ಲು, ರಘುರಾಮ್ ಕುಳ್ಳುಂಜೆ, ಗೋಪಾಲ ಎಲ್ಮಣ್ಣು, ಯಕ್ಷಸಿರಿ ಮಕ್ಕಳ ಯಕ್ಷಗಾನ ಬಳಗದ ಮುಖ್ಯಸ್ಥರಾದ
ಕಿಶೋರ್ ಕುಮಾರ್ ಆರೂರು, ಭರತ್ ತಲ್ಲಂಜೆ, ನಾರಾಯಣ ಟಿ., ಸುನಿಲ್ ಕುಮಾರ್, ಗಣೇಶ್ ತಲ್ಲಂಜೆ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಸುಜಿತ್ ಶೇಟ್ ಸ್ವಾಗತಿಸಿ, ರಾಘವೇಂದ್ರ ತಲ್ಲಂಜೆ ವಂದಿಸಿದರು. ಸ್ಥಾಪಕಾಧ್ಯಕ್ಷ ನಾಗರಾಜ್ ತಲ್ಲಂಜೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!