Tuesday, September 24, 2024
Tuesday, September 24, 2024

ರೋಟರಿ ಉಡುಪಿ- ಜನರೇಟರ್ ಕೊಡುಗೆ

ರೋಟರಿ ಉಡುಪಿ- ಜನರೇಟರ್ ಕೊಡುಗೆ

Date:

ಶ್ರೀ ಕೃಷ್ಣ ಬಾಲನಿಕೇತನಕ್ಕೆ ಗುರುರಾಜ ಭಟ್ ಮತ್ತು ಶುಭಲಕ್ಷ್ಮಿ ದಂಪತಿಗಳ ಪುತ್ರ ಆನಂದ ಮತ್ತು ಪಲ್ಲವಿಯವರಿಂದ ಕೊಡಲ್ಪಟ್ಟ ಜನರೇಟರ್ ಮತ್ತು ಇತರ ಉಪಕರಣಗಳನ್ನು ರೋಟರಿ ಉಡುಪಿ ಮುಖಾಂತರ ಹಸ್ತಾಂತರ ಕಾರ್ಯಕ್ರಮವು ಬಾಲನಿಕೇತನದ ಅಧ್ಯಕ್ಷರಾದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.

ಕೋಡುಗೆಯನ್ನು ಸ್ವೀಕರಿಸಿ ದಾನಿಗಳನ್ನು ಅಭಿನಂದಿಸಿದ ಪೇಜಾವರ ಶ್ರೀಗಳು, ರೋಟರಿಯ ಸಮುದಾಯ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಆಶಿಸಿದರು. ರೋಟರಿ ಉಡುಪಿಯ ಈ ವರ್ಷದ ಸಮುದಾಯ ಸೇವೆ ಕಾರ್ಯಕ್ರಮಗಳ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಪೇಜಾವರ ಶ್ರೀಗಳು ನೆರವೇರಿಸಿ ಶುಭ ಹಾರೈಸಿದರು. ಬಾಲನಿಕೇತನದ ವಠಾರದಲ್ಲಿ ಇದೇ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಗಿಡಗಳನ್ನು ನೆಟ್ಟರು.

ಕಾರ್ಪೊರೇಷನ್ ಬ್ಯಾಂಕ್ ಯೂನಿಯನ್ ಉಪಾಧ್ಯಕ್ಷ ರಘುರಾಮ ಕೃಷ್ಣ ಬಲ್ಲಾಳ, ಸಹ ಕಾರ್ಯದರ್ಶಿ ಹೆರಾಲ್ಡ್ ಡಿಸೋಜ, ಉಡುಪಿ ವಲಯ ಕಾರ್ಯದರ್ಶಿ ನಾಗೇಶ್ ನಾಯಕ್, ಪ್ರದೇಶ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಮತ್ತು ರಮೇಶ್, ಶ್ರೀ ಕೃಷ್ಣ ಬಾಲನಿಕೇತನದ ಉಪಾಧ್ಯಕ್ಷ ಪ್ರೊ. ಕಮಲಾಕ್ಷ, ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ, ರಘುರಾಮ ಆಚಾರ್ಯ, ರಾಮಚಂದ್ರ ಸನಿಲ್, ರಾಘವೇಂದ್ರ ರಾವ್, ಎಸ್ ವಿ ಭಟ್, ಗುರುರಾಜ ಭಟ್, ಸುಹಾನಿ ಕಾಮತ್, ರೋಟರಿ ಸದಸ್ಯರುಗಳಾದ ಲಕ್ಷ್ಮೀನಾರಾಯಣ, ರಾಧಿಕಾ ಲಕ್ಷ್ಮೀನಾರಾಯಣ, ದಿನೇಶ್ ಭಂಡಾರಿ, ವನಿತಾ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.

ರೋಟರಿ ಉಡುಪಿ ಅಧ್ಯಕ್ಷ ಹೇಮಂತಕಾಂತ ಸ್ವಾಗತಿಸಿ, ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!