Friday, September 27, 2024
Friday, September 27, 2024

ಬದ್ಧತೆಯಿಂದ ಕೂಡಿದ ನೌಕರ ವರ್ಗವೇ ಸಂಸ್ಥೆಯ ಅಮೂಲ್ಯ ಆಸ್ತಿ: ಅಶೋಕ್ ಕಾಮತ್

ಬದ್ಧತೆಯಿಂದ ಕೂಡಿದ ನೌಕರ ವರ್ಗವೇ ಸಂಸ್ಥೆಯ ಅಮೂಲ್ಯ ಆಸ್ತಿ: ಅಶೋಕ್ ಕಾಮತ್

Date:

ಉಡುಪಿ: ಬದ್ಧತೆಯಿಂದ ಕೂಡಿದ ನೌಕರವರ್ಗ ಮತ್ತು ಸಮರ್ಥ ಮುಂದಾಳತ್ವ ಇದ್ದಲ್ಲಿ ಯಾವುದೇ ಸಂಸ್ಥೆ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಾಧ್ಯ. ಪ್ರಾಮಾಣಿಕ ಪ್ರಯತ್ನವೊಂದೇ ಯಶಸ್ಸಿಗೆ ಮೂಲ ಮಂತ್ರ ಎಂದು ಜಿಲ್ಲಾ ಶಿಕ್ಷಕ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಶೋಕ್ ಕಾಮತ್ ರವರು ಅಭಿಪ್ರಾಯಪಟ್ಟರು.

ಅವರು ಪದೋನ್ನತಿಯೊಂದಿಗೆ ವರ್ಗಾವಣೆ ಹೊಂದಿದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಮುಖ್ಯಸ್ಥ ವಿಶ್ವನಾಥ ಬಾಯರಿಯವರ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ಸ್ವಪ್ರತಿಷ್ಠೆ, ಸ್ವಹಿತಾಸಕ್ತಿ ಬದಿಗಿರಿಸಿ ದುಡಿಯುವ ನೌಕರವರ್ಗ ಸಂಸ್ಥೆಯ ಅಮೂಲ್ಯ ಆಸ್ತಿ. ಆ ನೌಕರರನ್ನು ಸಮರ್ಥವಾಗಿ ಮುನ್ನಡೆಸುವ ಯೋಗ್ಯ ಮುಂದಾಳು ಇದ್ದಲ್ಲಿ ಸಂಸ್ಥೆ ಮುನ್ನೆಲೆಗೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ. ವಿಶ್ವನಾಥ ಬಾಯರಿ ಯವರ ಮುಂದಾಳತ್ವದಿಂದ ಈ ಸಂಸ್ಥೆ ಇಷ್ಟು ಎತ್ತರಕ್ಕೆ ಏರಲು ಸಾಧ್ಯವಾಗಿದೆ ಎಂದು ಹೇಳಿದರು.

ಪದವಿ ಪೂರ್ವ ಕಾಲೇಜು ವಿಭಾಗದ ಪ್ರಭಾರ ಪ್ರಾಂಶುಪಾಲ ಯಾದವ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ತಾರಾದೇವಿ, ಶಿಕ್ಷಣ ಸ್ಥಾಯಿ ಸಮಿತಿಯ ಶೇಖರ್ ಕೋಟ್ಯಾನ್, ದಾನಿ ನಿರುಪಮಾ ಪ್ರಸಾದ್ ಶೆಟ್ಟಿ, ಮಹಾಮಾಯಾ ಫೌಂಡೇಶನ್ ನ ಉಷಾ ಪೈ, ಎಸ್ ಡಿ ಎಂ ಸಿ ಸದಸ್ಯರು ಅತಿಥಿಗಳಾಗಿ ಭಾಗವಹಿಸಿ ಶುಭಾಶಯ ಕೋರಿದರು.

ವಿಶ್ವನಾಥ ಬಾಯರಿ ದಂಪತಿ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕ ಗಂಗಾಧರ್ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಉರಾಳ್ ವಂದಿಸಿದರು ಶಿಕ್ಷಕ ಶೇಖರ್ ಬೋವಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ...

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.26: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ...
error: Content is protected !!