Friday, September 20, 2024
Friday, September 20, 2024

ಮೀನುಗಾರರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಲಿ: ಅಶೋಕ್ ಕುಮಾರ್ ಕೊಡವೂರು

ಮೀನುಗಾರರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಲಿ: ಅಶೋಕ್ ಕುಮಾರ್ ಕೊಡವೂರು

Date:

ಉಡುಪಿ: ಇದೇ ಬರುವ ಅಗಸ್ಟ್ ತಿಂಗಳಲ್ಲಿ ಮೀನುಗಾರಿಕಾ ಋತು ಪ್ರಾರಂಭಗೊಳ್ಳುವ ನಿಟ್ಟಿನಲ್ಲಿ ಸರಕಾರ ಈ ಕೂಡಲೇ ವಿಳಂಬ ಮಾಡದೆ ಮೀನುಗಾರಿಕೆಗೆ ಅನುವು ಮಾಡಿಕೊಡಲು ಡೀಸೆಲ್ ಪಾಸ್ ಪುಸ್ತಕದ ನವೀಕರಣ ಮಾಡಿ ಕೊಡಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸರಕಾರವನ್ನು ಆಗ್ರಹಿಸುತ್ತದೆ. ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಸರಕಾರ ಅಧಿಕಾರವನ್ನು ಉಳಿಸಿಕೊಳ್ಳುವತ್ತ ಚಿಂತಿಸುವುದೇ ಹೊರತು ಜನರ ಸಂಕಷ್ಟಗಳಿಗೆ ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ.

ಬೋಟುಗಳಿಗೆ ಒಂದು ಟ್ರಿಪ್‌ಗೆ 4 ಸಾವಿರದಿಂದ 5 ಸಾವಿರ ಲೀಟರ್‌ವರೆಗೆ ಡೀಸೆಲ್ ವಿನಿಯೋಗವಾಗುತ್ತದೆ. ಈಗಾಗಲೇ ಸರಕಾರ ಡೀಸೆಲ್‌ಗೆ ಅತ್ಯಧಿಕ ಕರ ಹೇರಿ ಮೀನುಗಾರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಕಳೆದ ಬಾರಿ 70 ರೂಪಾಯಿ ಇದ್ದ ಬೆಲೆ ಪ್ರಸ್ತುತ 98 ರೂಪಾಯಿಗೆ ನೆಗೆದಿದೆ. ಸರಕಾರದಿಂದ ಬರುವ ಸಬ್ಸಿಡಿ ಸೌಲಭ್ಯ ಪಡೆಯಲು ಪಾಸ್‌ಬುಕ್ ಕಡ್ಡಾಯವಾಗಿರುವುದರಿಂದ ಅದು ನವೀಕರಣಗೊಳಿಸದೆ ಸಬ್ಸಿಡಿ ಡೀಸೆಲ್ ಪಡೆಯಲು ಅಸಾಧ್ಯವಾಗಿದೆ. ಹಾಗೆಯೇ ಸರಕಾರದ ದ್ವಿಮುಖ ಸಂಹವನ ಸಾಧನವನ್ನು ಅಳವಡಿಸಲು ಆದೇಶಿಸಿದ್ದು, ಮೀನುಗಾರರು ಇದರ ಅಳವಡಿಕೆಗಾಗಿ ಸಮಯಾವಕಾಶದ ಬೇಡಿಕೆ ಸಲ್ಲಿಸಿದ್ದಾರೆ. ಈ ಯಂತ್ರೋಪಕರಣ ಅಳವಡಿಕೆ ಮಾಡಿದಲ್ಲಿ ಅದರ ಸರ್ವಿಸ್ ಸೆಂಟರ್‌ನ ಸೌಲಭ್ಯದ ಬಗ್ಗೆ ಸರಕಾರ ಗಮನಹರಿಸಬೇಕಾಗಿದೆ ಮತ್ತು ಸರಕಾರ ಲ್ಯಾಂಡಿಂಗ್ ಬರ್ತಿಂಗ್ ಶುಲ್ಕವನ್ನು 3500 ರಿಂದ 12 ಸಾವಿರದವರೆಗೆ ಏರಿಸಿರುವುದು ಅವೈಜ್ಞಾನಿಕ.

ಕರಾವಳಿ ಪ್ರದೇಶದ ಸಾವಿರಾರು ಕುಟುಂಬಗಳು ಮೀನುಗಾರಿಕೆಯನ್ನು ಅವಲಂಬಿಸಿ ಜೀವನ ನಡೆಸುವುದರಿಂದ ಸರಕಾರ ಶೀಘ್ರವಾಗಿ ಮೀನುಗಾರರ ಈ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ. ಕೋವಿಡ್-19 ಹಿನ್ನಲೆಯಲ್ಲಿ ಮೀನುಗಾರರು ಈಗಾಗಲೇ ತೀವ್ರ ಸಂಕಷ್ಟದಲ್ಲಿದ್ದು ಅವರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಬೇಕಾಗಿದೆ ಇಲ್ಲದೇ ಹೋದಲ್ಲಿ ಕರಾವಳಿಯ ಸಮಸ್ತ ಮೀನುಗಾರರ ಪರವಾಗಿ ಕಾಂಗ್ರೆಸ್ ಪಕ್ಷದಿಂದ ಹೋರಾಟ ಅನಿವಾರ್ಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಜಿಲ್ಲಾ ಮೀನುಗಾರ ಕಾಂಗ್ರೆಸ್ ಸಂಘಟನೆಯ ಅಧ್ಯಕ್ಷರಾದ ಅಖಿಲೇಶ್ ಕೋಟ್ಯಾನ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!