Friday, September 20, 2024
Friday, September 20, 2024

ಕೇರಳದಲ್ಲಿ ಕೋವಿಡ್ ಆರ್ಭಟ: ರಾಜ್ಯಕ್ಕೆ ಎಚ್ಚರಿಕೆಯ ಕರೆಘಂಟೆ

ಕೇರಳದಲ್ಲಿ ಕೋವಿಡ್ ಆರ್ಭಟ: ರಾಜ್ಯಕ್ಕೆ ಎಚ್ಚರಿಕೆಯ ಕರೆಘಂಟೆ

Date:

ಉಡುಪಿ: ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಕೊರೊನಾ ಅಬ್ಬರ ತೀವ್ರವಾಗಿದೆ. ಶುಕ್ರವಾರ ಕೇರಳದಲ್ಲಿ 20,772 ಹೊಸ ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು 116 ಮಂದಿ ಸಾವನ್ನಪ್ಪಿದ್ದಾರೆ.

ಏತನ್ಮಧ್ಯೆ ಕೇಂದ್ರದಿಂದ ತಂಡವು ಪರಿಶೀಲನೆ ನಡೆಸುವ ಸಲುವಾಗಿ ಕೇರಳಕ್ಕೆ ಬಂದಿಳಿದಿದೆ. ತಂಡದ ನಿರ್ದೇಶಕ ಡಾ. ಎಸ್.ಕೆ. ಸಿಂಗ್ ಸುದ್ಧಿಗಾರರೊಂದಿಗೆ ಮಾತನಾಡುತ್ತಾ, ದೇಶಾದ್ಯಂತ ಕೊರೊನಾ ನಿಯಂತ್ರಣದಲ್ಲಿದ್ದರೂ ಕೇರಳದಲ್ಲಿ ಮಾತ್ರ ಪಾಸಿಟಿವಿಟಿ ಪ್ರಮಾಣ ಮತ್ತು ಹರಡುವಿಕೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಕುರಿತು ಕೇರಳ ಸರಕಾರದೊಂದಿಗೆ ಗಂಭೀರ ಚರ್ಚೆ ನಡೆಯಲಿದೆ. ಇದಕ್ಕೆ ಸೂಕ್ತವಾದ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇವೆ ಎಂದು ಹೇಳಿದರು.

ರಾಜ್ಯಕ್ಕೆ ಎಚ್ಚರಿಕೆಯ ಕರೆಘಂಟೆ:

ಕೇರಳದಿಂದ ಪ್ರವಾಸ ಮತ್ತು ಅನ್ಯ ಕಾರ್ಯದ ನಿಮಿತ್ತ ರಾಜ್ಯಕ್ಕೆ ಬರುವವರು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಈ ಕುರಿತು ಸರಿಯಾದ ರೀತಿಯಲ್ಲಿ ನಿಗಾವಹಿಸಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ಈಗಾಗಲೇ ನಿಯಂತ್ರಣಕ್ಕೆ ಬಂದಿರುವ ಪಾಸಿಟಿವ್ ಪ್ರಕರಣಗಳು ಮತ್ತೊಮ್ಮೆ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ.

ಈಗಾಗಲೇ ಕೇರಳ-ಕರ್ನಾಟಕ ಗಡಿ ಪ್ರದೇಶಗಳಲ್ಲಿ ತಪಾಸಣೆ ಆರಂಭಗೊಂಡಿದ್ದು ಮತ್ತಷ್ಟು ಕಟ್ಟುನಿಟ್ಟಾಗಿ ನಡೆಯಬೇಕಿದೆ. ಕೋವಿಡ್ ಮುಂಜಾಗ್ರತಾ ಕ್ರಮಗಳು ಉಲ್ಲಂಘನೆಯಾಗದ ಹಾಗೆ ಎಚ್ಚರಿಕೆ ವಹಿಸಬೇಕಾಗಿದೆ.

ಶುಕ್ರವಾರ ರಾಜ್ಯದಲ್ಲಿ 1890 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು 34 ಮಂದಿ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!