Friday, September 27, 2024
Friday, September 27, 2024

ಕನ್ನಡ ಜಾನಪದ ಅಧ್ಯಯನದಲ್ಲಿ ಎ.ಕೆ. ರಾಮಾನುಜನ್ ಪ್ರಾತಃ ಸ್ಮರಣೀಯರು: ಪ್ರೊ. ಬಿ.ಎ. ವಿವೇಕ್ ರೈ

ಕನ್ನಡ ಜಾನಪದ ಅಧ್ಯಯನದಲ್ಲಿ ಎ.ಕೆ. ರಾಮಾನುಜನ್ ಪ್ರಾತಃ ಸ್ಮರಣೀಯರು: ಪ್ರೊ. ಬಿ.ಎ. ವಿವೇಕ್ ರೈ

Date:

ಉಡುಪಿ: ಕನ್ನಡ ಸಾಹಿತ್ಯ ಮತ್ತು ಜಾನಪದ ಅಧ್ಯಯನಕ್ಕೆ ಡಾ. ಎ. ಕೆ. ರಾಮಾನುಜನ್ ಅವರ ಕೊಡುಗೆ ಅಪೂರ್ವವಾದುದು. ಕನ್ನಡ ಜಾನಪದ ಅಧ್ಯಯನದಲ್ಲಿ ಸೈದ್ದಾಂತಿಕ ನೆಲೆಗಟ್ಟನ್ನು ನೀಡುವಲ್ಲಿ ರಾಮಾನುಜನ್ ಕೊಡುಗೆಯನ್ನು ಅರ್ಥಮಾಡಿಕೊಳ್ಳುವ ಅಗತ್ಯವಿದೆ. ಅವರ ಶರಣರ ವಚನಗಳ ಕುರಿತಾದ “ದಿ ಸ್ಪೀಕಿಂಗ್ ಆಫ್ ಶಿವ” ಅಂಗ್ಲ ಕೃತಿಯು ವಚನ ಸಾಹಿತ್ಯವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಖ್ಯಾತ ವಿದ್ವಾಂಸರು, ವಿಶ್ರಾಂತ ಕುಲಪತಿಗಳು ಮತ್ತು ಜರ್ಮನಿಯ ವುರ್ಜ್ಬರ್ಗ್ ಇಂಡಸ್ ವಿಶ್ವವಿದ್ಯಾನಿಲಯದ ಅತಿಥಿ ಪ್ರಾಧ್ಯಾಪಕರಾದ ಪ್ರೊ. ಬಿ.ಎ. ವಿವೇಕ್ ರೈ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಮತ್ತು ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ನಡೆದ ’ಎ.ಕೆ. ರಾಮಾನುಜನ್ ಅವರ ಕೊಡುಗ” ಸಂವಾದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಡಿ.ಬಿ. ನಾಯಕ್ ಅವರು ಉದ್ಘಾಟಿಸಿದರು.

ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಎಸ್. ಎ. ಕೃಷ್ಣಯ್ಯ ಅವರು ಮಾತನಾಡಿ ಜಾಗತಿಕವಾಗಿ ಜಾನಪದಕ್ಕೆ ಕೊಡುಗೆ ನೀಡಿದ ೧೮ ವಿದ್ವಾಂಸರ ಸಂದರ್ಶನವನ್ನು ನಡೆಸಲಾಗಿದೆ. ಅವರಲ್ಲಿ ಎ.ಕೆ. ರಾಮಾನುಜನ್ ಅವರು ಜಾನಪದ ಸಂಶೋಧನೆ ತನಗೆ ತೆರೆದುಕೊಂಡ ರೀತಿಯನ್ನು ವಿವರಿಸಿದ್ದಾರೆಂದು ಸಂದರ್ಶನವನ್ನು ಅಧಾರವಾಗಿಟ್ಟುಕೊಂಡು ರಾಮಾನುಜನ್ ಅವರ ಕೊಡುಗೆಯನ್ನು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣನಾಥ ಎಕ್ಕಾರು ಅವರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಐ.ಕ್ಯೂ.ಎ.ಸಿ. ಮುಖ್ಯಸ್ಥರಾದ ಡಾ. ಸುರೇಶ್ ರೈ. ಕೆ. ಉಪಸ್ಥಿತರಿದ್ದರು. ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಟ್ರಸ್ಟಿ ಮ್ಯೂಸಿಕಾ ಸುಪ್ರೀಯ ವಂದಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...
error: Content is protected !!