Friday, September 20, 2024
Friday, September 20, 2024

ಮುಳ್ಳುಹಂದಿ ಸಂಚಾರ, ಕಾರ್ಯಾಚರಣೆ

ಮುಳ್ಳುಹಂದಿ ಸಂಚಾರ, ಕಾರ್ಯಾಚರಣೆ

Date:

ಉಡುಪಿ: ಚಂದು ಮೈದಾನ ಇಲ್ಲಿಯ ಜನವಸತಿ ಪರಿಸರದ ರಸ್ತೆಗಳಲ್ಲಿ ರಾತ್ರಿಯ ಸಮಯ ಮುಳ್ಳು ಹಂದಿಗಳ ಸಂಚಾರ ಇರುವುದನ್ನು ಸ್ಥಳೀಯರು ಗಮನಿಸಿದ್ದರು. ರಾತ್ರಿಯ ಸಮಯ ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸಲು ಆತಂಕ ಎದುರಿಸುತ್ತಿದ್ದರು. ಈ ಬಗ್ಗೆ ಪತ್ರಕರ್ತ ಸಂತೋಷ್ ಸರಳಬೆಟ್ಟು ಅವರು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಾಯವಾಣಿಗೆ ಮಾಹಿತಿ ನೀಡಿದ್ದರು.

ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮುಳ್ಳು ಹಂದಿಯ ಸಂಚರಿಸುವುದು ಕಂಡುಬಂದಿದೆ. ಸಂಚಾರ ಸ್ಥಳ ಗುರುತಿಸಿ, ಅರಣ್ಯ ಇಲಾಖೆ ಮತ್ತು ನಾಗರಿಕ ಸಮಿತಿಯ ಕಾರ್ಯಕರ್ತರು ಮುಳ್ಳು ಹಂದಿಯ ವಶಕ್ಕೆ ಪಡೆಯಲು, ಬೆಳಕಿನ ವ್ಯವಸ್ಥೆಯೊಂದಿಗೆ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಸುರೇಶ್ ಜಿ, ಅರಣ್ಯ ರಕ್ಷಕ ದೇವರಾಜ್ ಪಾಣ, ಸಿಬ್ಬಂದಿ ಜೋಯ್, ಹಾಗೂ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಭಾಗಿಯಾಗಿದ್ದರು.

ಗಾಢವಾದ ಕತ್ತಲು, ಮತ್ತು ಪೊದೆಗಳು ಬೆಳೆದಿರುವುದರಿಂದ ಕಾರ್ಯಾಚರಣೆಗೆ ಅಡಚಣೆ ಎದುರಾಯಿತು. ಮುಳ್ಳು ಹಂದಿ ಪೊದೆಗಳಲ್ಲಿ ಅವಿತುಕೊಂಡು ಕಾರ್ಯಾಚರಣೆ ವಿಫಲಗೊಳಿಸಿತು. ಕಾನನ ಪ್ರದೇಶದಲ್ಲಿ ಜೀವಿಸಬೇಕಾಗಿದ್ದ ವನ್ಯಜೀವಿಗಳು, ಆಹಾರದ ಕೊರತೆಯಿಂದಾಗಿ ಜನವಸತಿ ಪ್ರದೇಶಗಳಲ್ಲಿ ನೆಲೆ ಬಯಸಿವೆ. ಈ ಪ್ರದೇಶದಲ್ಲಿ ಹೆಬ್ಬಾವು, ಮುಳ್ಳು ಹಂದಿಗಳು ಗೋಚರಿಸುತ್ತಲೇ ಇರುತ್ತವೆ ಎಂದು ಸ್ಥಳೀಯರು ಹೇಳಿಕೊಂಡರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!