Monday, September 30, 2024
Monday, September 30, 2024

ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿದ ಕಾರ್ಯದಿಂದ ನೆಮ್ಮದಿ: ರಾಜೇಶ್ ಐತಾಳ್

ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿದ ಕಾರ್ಯದಿಂದ ನೆಮ್ಮದಿ: ರಾಜೇಶ್ ಐತಾಳ್

Date:

ಕೋಟ: ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿದ ಕಾರ್ಯದಿಂದ ನಮಗೆ ಮನಸ್ಸಿನಲ್ಲಿ ನೆಮ್ಮದಿ ಸಿಗುತ್ತದೆ. ಸಮಾಜದಲ್ಲಿ ನಮ್ಮ ನಡುವೆ ಸುದ್ಧಿ ಇಲ್ಲದೇ ಸಮಾಜಮುಖಿ ಸೇವೆಗಳಲ್ಲಿ ತೊಡಗಿಸಿಕೊಂಡವರಿರುತ್ತಾರೆ, ಅಂತವರನ್ನು ಮುಖ್ಯವಾಹಿನಿಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಪುರೋಹಿತ ರಾಜೇಶ್ ಐತಾಳ್ ಎತ್ತಿನಟ್ಟೆ ಹೇಳಿದರು.

ಅವರು ಶ್ರೀ ವಿನಾಯಕ ಯುವಕ ಮಂಡಲ(ರಿ.) ಸಾಯ್ಬ್ರಕಟ್ಟೆ-ಯಡ್ತಾಡಿ ಇವರ ಆಶ್ರಯದಲ್ಲಿ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ನಡೆದ 37 ವರ್ಷಗಳ ಕಾಲ ವಿದ್ಯಾರ್ಥಿ ವಸತಿ ನಿಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಜನಸ್ನೇಹಿ ತೇಜ ನಾಯ್ಕ್ ಅವರ ಅಭಿನಂದನಾ ಕಾರ್ಯಕ್ರಮ ತೇಜೋಮಯ-2021 (ನಳಪಾಕದ ನಡುಶಾಲೆ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಾಲಾಭಿವೃದ್ಧಿ ಅಧ್ಯಕ್ಷ ರವಿ ಶೆಟ್ಟಿ ಕೊಳ್ಕೆಬೈಲು ಮಾತಾನಾಡಿ, ತೇಜ ನಾಯ್ಕ ಅವರ ಏಳು- ಬೀಳು ಸಮಾನಾಗಿ ಸ್ವೀಕರಿಸಿ ಮುನ್ನೆಡೆದವರು. ಅವರ ಮುಂದಿನ ಜೀವನ ಸುಖವಾಗಿರಲಿ ಎಂದು ಹಾರೈಸಿದರು.

ಯುವಕ ಮಂಡಲದ ಅಧ್ಯಕ್ಷ ರತ್ನಾಕರ ಪೂಜಾರಿ, ಮಹಾತ್ಮ ಗಾಂಧಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ನಾಯ್ಕ್, ನೆಹರು ಯುವ ಕೇಂದ್ರ ಉಡುಪಿ ಇದರ ಪ್ರದೀಪ್, ಯುವಕ ಮಂಡಲದ ಕಾರ್ಯದರ್ಶಿ ಪ್ರಶಾಂತ್ ಸೂರ್ಯ, ಉಪಾಧ್ಯಕ್ಷ ರಾಜೇಶ್ ದೇವಾಡಿಗ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸದಸ್ಯ ಅಜಿತ್ ಕುಮಾರ್ ಪ್ರಸ್ತಾವಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!