Monday, September 30, 2024
Monday, September 30, 2024

ಜಾತಿ ಮೀರಿದ ರಾಜಕಾರಣ, ಪ್ರಯೋಗಶೀಲತೆ ಅರಸರ ಉತ್ಕೃಷ್ಟ ಗುಣ: ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

ಜಾತಿ ಮೀರಿದ ರಾಜಕಾರಣ, ಪ್ರಯೋಗಶೀಲತೆ ಅರಸರ ಉತ್ಕೃಷ್ಟ ಗುಣ: ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

Date:

ಉಡುಪಿ: ದಿ. ದೇವರಾಜ ಅರಸರು ಈ ನಾಡು ಕಂಡ ಒಬ್ಬ ಶ್ರೇಷ್ಠ ಮುಖ್ಯಮಂತ್ರಿ ಅನ್ನುವ ಕೀರ್ತಿಗೆ ಭಾಜನರಾಗಿರುವುದು ಜಾತಿ ಆಧರಿತ ರಾಜಕಾರಣದಿಂದಾಗಿ ಅಲ್ಲ, ಬದಲಾಗಿ ಅವರಲ್ಲಿದ್ದ ಜಾತಿ ಮೀರಿದ ರಾಜಕಾರಣ, ಆಡಳಿತದಲ್ಲಿ ಪ್ರಯೋಗಶೀಲತೆ. ಅವರ ಪ್ರತಿಯೊಂದು ನಿರ್ಧಾರ ದೀನ ದಲಿತರ ಹಿಂದುಳಿದ ವರ್ಗದ ಶ್ರೇಯೋಭಿೃದ್ದಿಯ ದಿಕ್ಕಿನಲ್ಲಿಯೇ ಸಾಗಿತ್ತು.

ಭೂಸುಧಾರಣಾ ಕಾನೂನನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕೀರ್ತಿ ಅರಸರಿಗೆ ಸಲ್ಲುತ್ತದೆ. ಅರಸರ ಆಡಳಿತದ ಅವಧಿ ಸಾರ್ವತ್ರಿಕ ಸಾರ್ವಕಾಲಿಕವಾಗಿ ನೆನಪಿಸಬೇಕಾದ ಅರಸು ಯುಗವನ್ನೇ ಸೃಷ್ಟಿ ಮಾಡಿದೆ ಎಂದು ಅಂಕಣಕಾರ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

ಉಡುಪಿ ಜಿಲ್ಲಾ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸುರವರ 106 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ವಿಶೇಷ ಉಪನ್ಯಾಸ ನೀಡಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೇವಿಂದ್ರ ಎಸ್ ಬಿರಾದರ ಉಪಸ್ಥಿತರಿದ್ದರು.

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನರಸಿಂಹ ಪೂಜಾರಿ ವಂದಿಸಿದರು, ಲೆಕ್ಕಾಧೀಕ್ಷಕಿ ಸುಗುಣಾ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!