Tuesday, October 1, 2024
Tuesday, October 1, 2024

ಜಿಲ್ಲಾ ಗ್ರಂಥಾಲಯಕ್ಕೆ ಬನ್ನಂಜೆ ಗೋವಿಂದಾಚಾರ್ಯರ ಹೆಸರು: ಸರ್ಕಾರಕ್ಕೆ ಶಾಸಕ ರಘುಪತಿ ಭಟ್ ಮನವಿ

ಜಿಲ್ಲಾ ಗ್ರಂಥಾಲಯಕ್ಕೆ ಬನ್ನಂಜೆ ಗೋವಿಂದಾಚಾರ್ಯರ ಹೆಸರು: ಸರ್ಕಾರಕ್ಕೆ ಶಾಸಕ ರಘುಪತಿ ಭಟ್ ಮನವಿ

Date:

ಉಡುಪಿ: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಉಡುಪಿಯ ವಿದ್ಯಾವಾಚಸ್ಪತಿ ಗೋವಿಂದಾಚಾರ್ಯರು ತಮ್ಮ ಪ್ರವಚನಗಳಿಂದಲೇ ಮನೆ ಮಾತಾಗಿ ಬನ್ನಂಜೆ ಗೋವಿಂದಾಚಾರ್ಯ ಎಂದೇ ಗುರುತಿಸಿಕೊಂಡಿದ್ದು, ಮಾಧ್ವ ತತ್ವದಲ್ಲಿ ಅಮೋಘ ಪಾಂಡಿತ್ಯ ಹೊಂದಿದ್ದರು.

ಕನ್ನಡ ಹಾಗೂ ಸಂಸ್ಕೃತದಲ್ಲೂ ಪಾಂಡಿತ್ಯ ಹೊಂದಿದ್ದ ಇವರು ಹಲವು ಕೃತಿಗಳನ್ನೂ ರಚಿಸಿದ್ದಾರೆ. ದೇಶ ವಿದೇಶಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಬನ್ನಂಜೆ ಗೋವಿಂದಾಚಾರ್ಯರು ಸಾಹಿತಿ, ವಿದ್ವಾಂಸಕ, ಪತ್ರಕರ್ತ, ಸಂಶೋಧಕ, ಅನುವಾದಕ, ಭಾಷಾಂತರಕಾರ, ಭಾಷ್ಯಾಕಾರ, ಕವಿ, ಪ್ರವಚನಕಾರ, ಉಪನ್ಯಾಸಕ ಹೀಗೆ ಬಹುವಿಧವಾಗಿ ಅಮೂಲ್ಯ ವಾಙ್ಮಯ ಕೊಡುಗೆ ಧಾರೆಯೆರೆದು ಉಡುಪಿಗೆ ಕೀರ್ತಿ ತಂದ ಇವರ ಹೆಸರು ಉಡುಪಿ ಜಿಲ್ಲಾ ಗ್ರಂಥಾಲಯಕ್ಕೆ ಇಡುವುದು ಸೂಕ್ತ ಎಂದು ಶಾಸಕ ರಘುಪತಿ ಭಟ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಅಧಿಕಾರಿಗಳೊಂದಿಗೆ ಶುಕ್ರವಾರ ಜಿಲ್ಲಾ ಗ್ರಂಥಾಲಯಕ್ಕೆ ಭೇಟಿ ನೀಡಿ ಚರ್ಚಿಸಿದ ಶಾಸಕರು ಗ್ರಂಥಾಲಯದ ಒಂದು ಮಹಡಿಯಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಗ್ರಂಥಗಳನ್ನು, ಕೃತಿಗಳನ್ನು ಸಂಗ್ರಹಿಸಿ ಇಡುವುದು ಹಾಗೂ ಅವರ ಪ್ರವಚನಗಳ ಆಡಿಯೋ ವಿಷನ್ ಸಂಗ್ರಹಿಸಿ ಇಡುವ ಬಗ್ಗೆ ಸೂಚಿಸಿದರು.

ಸ್ಥಳೀಯ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಉಡುಪಿ ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ನಿರ್ಮಿತಿ ಕೇಂದ್ರದ ಅರುಣ್, ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಹಾಗೂ ಸಾಮಾಜಿಕ ಕಾರ್ಯಕರ್ತ ವಾಸುದೇವ್ ಭಟ್ ಪೆರಂಪಳ್ಳಿ, ಬನ್ನಂಜೆ ಗೋವಿಂದಾಚಾರ್ಯರ ಪುತ್ರ ವಿನಯ ಭೂಷಣ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!