Saturday, September 21, 2024
Saturday, September 21, 2024

ಗೋವಿಗಾಗಿ ಮೇವು ಸಂಘಟನೆಯಿಂದ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಆಚರಣೆ

ಗೋವಿಗಾಗಿ ಮೇವು ಸಂಘಟನೆಯಿಂದ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಆಚರಣೆ

Date:

ಮಣಿಪಾಲ: ಪ್ರಧಾನಿ ನರೇಂದ್ರ ಮೋದಿಯವರ 71 ನೇ ಜನ್ಮದಿನದ ಅಂಗವಾಗಿ ಅನಾಥ ಗೋವುಗಳ ಸಂರಕ್ಷಣೆಗಾಗಿ ಹುಟ್ಟಿಕೊಂಡಿರುವ ಗೋವಿಗಾಗಿ ಮೇವು ಸಂಘಟನೆ ಉಡುಪಿ ಜಿಲ್ಲಾ ತಂಡದ ನೇತೃತ್ವದಲ್ಲಿ ಪರ್ಕಳದ ಸರಳಬೆಟ್ಟು ಹೊಸಬೆಳಕು ಆಶ್ರಮದ ನಿವಾಸಿಗಳೊಂದಿಗೆ ಕೇಕ್ ಕತ್ತರಿಸಿ, ಭೋಜನ ಕೂಟ ಏರ್ಪಡಿಸಿ ಆಶ್ರಮದಲ್ಲಿರುವ ಗೋಶಾಲೆಗೆ ಮೇವು ನೀಡಿ ಆಚರಿಸಲಾಯಿತು.

ಕಾರ್ಯಕ್ರಮ ಸಂಘಟಿಸಿ ಮಾತನಾಡಿದ ಗೋವಿಗಾಗಿ ಮೇವು ಸ್ಥಾಪಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ವಿಶ್ವ ಕಂಡ ಶ್ರೇಷ್ಠ ನಾಯಕ ನರೇಂದ್ರ ಮೋದಿಯವರ ಜನ್ಮದಿನವನ್ನು ವಿಶೇಷ ಚೇತನರು, ನಿರ್ಗತಿಕರು ಇರುವ ಹೊಸಬೆಳಕು ಆಶ್ರಮದಲ್ಲಿ ಆಚರಿಸಿ ಶತಾಯುಷಿ ಗಿರಿಜಾ ಅವರ ಕೈಯಲ್ಲಿ ದೀಪ ಬೆಳಗಿಸುವುದರ ಮೂಲಕ ರಾಷ್ಟ್ರಭಕ್ತ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ ನೀಡಿ ಸುದೀರ್ಘಕಾಲ ದೇಶ ಸೇವೆ ಮಾಡುವ ಭಾಗ್ಯ ನೀಡಲಿ ಎಂದು ಗೋವಿಗಾಗಿ ಮೇವು ಸಂಘಟನೆ ಪ್ರಾರ್ಥಿಸುತ್ತದೆ ಎಂದರು.

ಗೋವಿಗಾಗಿ ಮೇವು ಚಿಕ್ಕಮಗಳೂರು ಉಸ್ತುವಾರಿ ನಾಗೇಂದ್ರ ಪುತ್ರನ್, ಗೋವಿಗಾಗಿ ಮೇವು ಜಿಲ್ಲಾ ಸಹಸಂಚಾಲಕ ವಿಕಾಸ್ ಶೆಟ್ಟಿ ಉಡುಪಿ, ಭರತ್ ಗಾಣಿಗ ಕೋಟ, ಆಶ್ರಮದ ಮುಖ್ಯಸ್ಥ ವಿನಯಚಂದ್ರ ಹಾಗೂ ಗೋವಿಗಾಗಿ ಮೇವು ಸಂಘಟನೆಯ ಪ್ರಮೋದ್ ಕಾಂಚನ್ ಬಾರಿಕೆರೆ, ವಸಂತ್ ಸುವರ್ಣ ಕೋಟ ಮಣೂರು ಹಾಗು ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!