Saturday, September 21, 2024
Saturday, September 21, 2024

ಜೇಸಿಐ ಬೆಳ್ಮಣ್ಣು- ಜೇಸಿ ಸಪ್ತಾಹ ಸಮಾರೋಪ

ಜೇಸಿಐ ಬೆಳ್ಮಣ್ಣು- ಜೇಸಿ ಸಪ್ತಾಹ ಸಮಾರೋಪ

Date:

ಬೆಳ್ಮಣ್: ಭಾರತೀಯ ಜೇಸಿಐನ ವಲಯ 15ರ 41 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಜೇಸಿಐ ಬೆಳ್ಮಣ್ಣು ಘಟಕದ ಜೇಸಿ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರಧಾನ, ಪೂರ್ವಾಧ್ಯಕ್ಷರುಗಳ ಸಮ್ಮಿಲನ, ಜೇಸಿ ಕುಟುಂಬೋತ್ಸವವು ಬೆಳ್ಮಣ್ಣು ಪಂಚಾಯತ್ ಸಭಾಂಗಣದಲ್ಲಿ ಘಟಕಾಧ್ಯಕ್ಷ ಕೃಷ್ಣ ಪವಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೇಸಿಐ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ, ಪೂರ್ವ ವಲಯಾಧ್ಯಕ್ಷ ಹರಿಶ್ಚಂದ್ರ ಅಮೀನ್, ವಲಯ ಉಪಾಧ್ಯಕ್ಷ ಸತ್ಯನಾರಾಯಣ ಭಟ್, ವಲಯದ ವ್ಯವಹಾರ ವಿಭಾಗದ ಅಧ್ಯಕ್ಷ ಸಮದ್ ಖಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಜೇಸಿಐ ರಾಷ್ಟ್ರ‍ೀಯ ತರಬೇತುದಾರ, ಪೂರ್ವ ವಲಯಾಧ್ಯಕ್ಷ ರಾಜೇಂದ್ರ ಭಟ್ ಅಭಿನಂದನಾ ಭಾಷಣ ಮಾಡಿದರು. ಬೆಳ್ಮಣ್ಣು ಜೇಸಿಐ ಘಟಕದ ಸದಸ್ಯ ರಾಜೇಶ್ ಕುಲಾಲ್ ಅವರಿಗೆ ಕಮಲ ಪತ್ರ ಪ್ರಶಸ್ತಿ, ಉದ್ಯಮಿ ಪೆರಲ್‌ಪಾದೆ ನಿತ್ಯಾನಂದ ಶೆಟ್ಟಿ ಅವರಿಗೆ ಟಿ.ಓ.ಬಿ.ಐ.ಪಿ ಪ್ರಶಸ್ತಿ, ಯುವ ಉದ್ಯಮಿ ಬೆಳ್ಮಣ್ಣು ಗೋಪಾಲಕೃಷ್ಣ ಶೆಣ್ಯೆ ಅವರಿಗೆ ಟಿ.ಓ.ವೈ.ಐ ಪ್ರಶಸ್ತಿ, ಯಕ್ಷಗಾನ ಕಲಾವಿದ ಸಂದೀಪ್ ಪುತ್ರನ್ ಅವರಿಗೆ ಕಲಾ ಸೌರಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದ ವೇದಿಕೆಯಲ್ಲಿ ಕಾರ್ಯದರ್ಶಿ ಅಬ್ಬನಡ್ಕ ಸತೀಶ್ ಪೂಜಾರಿ, ಕಾರ್ಯಕ್ರಮ ನಿರ್ದೇಶಕ ಸಂದೀಪ್ ಕುಲಾಲ್, ಜೇಜೇಸಿ ಅಧ್ಯಕ್ಷ ಪ್ರಥಮ್ ಮಲ್ಯ, ಜೇಸಿರೇಟ್ ಅಧ್ಯಕ್ಷೆ ಮಾಯಾ ಸಿ. ರಾವ್, ಘಟಕದ ಪೂರ್ವಾಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!