Sunday, October 6, 2024
Sunday, October 6, 2024

ಉಡುಪಿ ಮಲಬಾರ್ ಗೋಲ್ಡ್‌ನಿಂದ 29 ವಸತಿರಹಿತರಿಗೆ 26 ಲಕ್ಷ ರೂ. ಸಹಾಯಧನ ವಿತರಣೆ

ಉಡುಪಿ ಮಲಬಾರ್ ಗೋಲ್ಡ್‌ನಿಂದ 29 ವಸತಿರಹಿತರಿಗೆ 26 ಲಕ್ಷ ರೂ. ಸಹಾಯಧನ ವಿತರಣೆ

Date:

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್‌ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿರಹಿತ ಕುಟುಂಬಗಳಿಗೆ ಒಟ್ಟು 26ಲಕ್ಷ ರೂ. ಸಹಾಯಧನದ ಚೆಕ್ ವಿತರಣಾ ಸಮಾ ರಂಭವು ಶುಕ್ರವಾರ ಮಲಬಾರ್ ಗೋಲ್ಡ್ ಉಡುಪಿ ಮಳಿಗೆಯಲ್ಲಿ ನಡೆಯಿತು.

ಫಲಾನುಭವಿಗಳಿಗೆ ಚೆಕ್ ವಿತರಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾತನಾಡಿ, ಮಲಬಾರ್ ಗೋಲ್ಡ್ ಆರ್ಥಿಕ ವ್ಯವಹಾರದ ಜೊತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವುದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಸಾಮಾಜಿಕವಾಗಿ ನೆರವು ನೀಡುವ ಮೂಲಕ ಈ ಸಂಸ್ಥೆ ಸಮಾಜಮುಖಿ ಕೆಲಸ ಮಾಡುತ್ತಿದೆ. ತಮ್ಮ ಲಾಭದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಕ್ಕೆ ವಿನಿಯೋಗಿಸುತ್ತಿ ರುವುದು ಶ್ಲಾಘನೀಯ ಎಂದು ತಿಳಿಸಿದರು.

ಪರ್ಕಳ ದೇವಿನಗರದ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಹಾಜಿ ಕೆ. ಅಬೂಬಕರ್ ಪರ್ಕಳ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸಾಮಾಜಿ ಕಾರ್ಯಕರ್ತೆ ವಿನುತಾ ಕಿರಣ್, ಸಮಾಜ ಸೇವಕ ವಿಲ್ಫ್ರೇಡ್ ಡಿಸೋಜ, ಕಿದಿಯೂರು ಉದಯ ಕುಮಾರ್ ಫ್ಯಾಮಿಲಿ ಟ್ರಸ್ಟ್‌ನ ಕೆ. ಉದಯ ಕುಮಾರ್ ಶೆಟ್ಟಿ, ಸಮಾಜ ಸೇವಕ ಲೀಲಾಧರ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಉಪಸ್ಥಿತರಿದ್ದರು.

ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಲ, ಶಿಕ್ಷಕರಾದ ಮನು ಹಂದಾಡಿ, ಅರ್ಪಿತಾ ಶೆಟ್ಟಿ ಕಟಪಾಡಿ, ವಂದನಾ ರೈ ಕಾರ್ಕಳ, ನಿರ್ಮಲ್ ಕುಮಾರ್ ಹೆಗ್ಡೆ ಕಾಪು, ಚಿತ್ರ ಕಲಾವಿದ ಅಕ್ಷಯ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.

ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪಿಜಿಆರ್‌ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ ಉಪಸ್ಥಿತರಿದ್ದರು.

ಆರ್.ಜೆ.ಎರಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!