Saturday, September 21, 2024
Saturday, September 21, 2024

ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

Date:

ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ರೋಟರಾಕ್ಟ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ ರೋಟರಿ ಸಭಾಂಗಣದಲ್ಲಿ ನಡೆಸಲಾಯಿತು.

ಜೀವನ ಎಂಬುದು ಒಂದು ಕ್ರಿಕೆಟ್ ಸ್ಟೇಡಿಯಂ ಇದ್ದ ಹಾಗೆ, ಬಾಲ್ ಎನ್ನುವ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇಕು. ವಿವಿಧ ಚಟುವಟಿಕೆಗಳನ್ನು ನಡೆಸುವ ಮೂಲಕ ಜೀವನದಲ್ಲಿ ಮಾತನಾಡುವ ಕಲೆ ನಾಯಕತ್ವದ ಗುಣ, ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಂಡಾಗ ಮಾತ್ರ ನಾವು ಯಶಸ್ವಿ ಜೀವನ ನಡೆಸಲು ಸಾಧ್ಯ. ಎಳವೆಯಲ್ಲೇ ಬದುಕನ್ನು ಎದುರಿಸುವ ಗುಣವನ್ನು ಬೆಳೆಸಿಕೊಳ್ಳಬೇಕೆಂದು ತರಬೇತುದಾರರಾಗಿ ಆಗಮಿಸಿದ ಅಕ್ಷತಾರವರು ತಿಳಿಸಿದರು.

ಗಂಗೊಳ್ಳಿ ರೋಟರಿ ಕ್ಲಬ್ ನ ರಾಜೇಶ್ ಎಂ ಜಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಾಕ್ಟ್ ಅಧ್ಯಕ್ಷರಾದ ಅಮೀಕ್ಷಾ ಡಿ ನಾಯ್ಕ್ ಹಾಗೂ ಕಾರ್ಯದರ್ಶಿ ರಾಮಕೃಷ್ಣ ಶೆಣೈ ಉಪಸ್ಥಿತರಿದ್ದರು.

ಎನ್.ಎಸ್.ಎಸ್ ಯೋಜನಾಧಿಕಾರಿ ಸುಗುಣ ಆರ್ ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ವಯಂ ಸೇವಕಿ ಜಾಹ್ನವಿ ಸ್ವಾಗತಿಸಿ, ಮಹಿಮಾ ವಂದಿಸಿದರು. ರಂಜಿತ ಬಿಲ್ಲವ ಅತಿಥಿಯನ್ನು ಪರಿಚಯಿಸಿದರು. ಪೂಜಾ ಡಿ ಪುತ್ರನ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!