Wednesday, October 9, 2024
Wednesday, October 9, 2024

ನಿಟ್ಟೂರು ಪ್ರೌಢಶಾಲೆ- ಪಿ.ಎಲ್. ಅಣ್ಣಾಜಿ ರಾವ್ ಸ್ಮಾರಕ ವಿದ್ಯಾರ್ಥಿವೇತನ ವಿತರಣೆ

ನಿಟ್ಟೂರು ಪ್ರೌಢಶಾಲೆ- ಪಿ.ಎಲ್. ಅಣ್ಣಾಜಿ ರಾವ್ ಸ್ಮಾರಕ ವಿದ್ಯಾರ್ಥಿವೇತನ ವಿತರಣೆ

Date:

ಉಡುಪಿ: ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಿ.ಲ್. ಅಣ್ಣಾಜಿ ರಾವ್ ಸ್ಮಾರಕ ಧರ್ಮನಿಧಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸುವ ಕಾರ್ಯಕ್ರಮ ನಿಟ್ಟೂರು ಪ್ರೌಢಶಾಲೆಯಲ್ಲಿ ಜರಗಿತು. ಕಳೆದ 10 ವರ್ಷಗಳಿಂದ ಪಿ.ಎಲ್. ಅಣ್ಣಾಜಿ ರಾವ್ ಅವರ ಪುತ್ರ ಪಿ.ಎಲ್. ರಾವ್ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಾ ಬಂದಿದ್ದು, ಈ ಬಾರಿ 30 ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ವಿದ್ಯಾರ್ಥಿವೇತನ ನೀಡಲಾಯಿತು.

ಜಾಹೀರಾತು

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮತ್ತು ನಿಕಟಪೂರ್ವ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ವಿದ್ಯಾರ್ಥಿವೇತನವನ್ನು ವಿತರಿಸಿ, ವಿದ್ಯಾರ್ಥಿಗಳು ಈ ಧನಸಹಾಯದ ಸದುಪಯೋಗ ಪಡೆದುಕೊಳ್ಳಬೇಕು, ಈ ನಿಟ್ಟಿನಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವ ಪಿ.ಎಲ್. ಅಣ್ಣಾಜಿ ರಾವ್ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ ಎಂದರು.

ಜಾಹೀರಾತು

ಶಾಲಾ ಮುಖ್ಯೋಪಾಧ್ಯಾಯಿನಿ ಅನಸೂಯ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಎಚ್.ಎನ್. ಶೃಂಗೇಶ್ವರ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಕ್ಕೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ

ಮೂಡುಬಿದಿರೆ, ಅ.9: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ತನ್ನಲ್ಲಿರುವ 20 ವಿವಿಧ...

ಪ್ರತಿಭೆಯನ್ನು ಗ್ರಹಿಸಿ ಅಭಿನಂದಿಸುವ ಮನೋಭಾವ ಬೆಳೆಸಿಕೊಳ್ಳಿ: ನರೇಂದ್ರ ಎಸ್ ಗಂಗೊಳ್ಳಿ

ಗಂಗೊಳ್ಳಿ, ಅ.9: ಮನುಷ್ಯನ ಹೊರನೋಟದ ಲಕ್ಷಣಗಳಿಂದ ಆತನ ವ್ಯಕ್ತಿತ್ವವನ್ನು ಅಳೆಯುವುದು ಮೂರ್ಖತನ....

ವಿಜ್ಞಾನ ಗ್ಯಾಲರಿಯಲ್ಲಿ ‘ಸೈ 650’ ಪ್ರದರ್ಶನ ಅನಾವರಣ

ಬೆಂಗಳೂರು, ಅ.9: ವಿಜ್ಞಾನದ ಹಲವು ಕುತೂಹಲಕಾರಿ ಸಂಗತಿಗಳು ಬೆಂಗಳೂರಿನ ವಿಜ್ಞಾನ ಗ್ಯಾಲರಿಯಲ್ಲಿ...

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...
error: Content is protected !!