Thursday, October 10, 2024
Thursday, October 10, 2024

ಆಸರೆ ಚಾರಿಟೇಬಲ್ ಟ್ರಸ್ಟ್- 100ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ

ಆಸರೆ ಚಾರಿಟೇಬಲ್ ಟ್ರಸ್ಟ್- 100ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ

Date:

ಉಡುಪಿ: ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ.) ಇದರ ಸೇವಾ ಪ್ರಕಲ್ಪದ ಅಂಗವಾಗಿ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಉಡುಪಿ ನಗರದ ಬಡವರ, ದೀನ ದಲಿತರ 100ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ ನಡೆಯಲಿದೆ.

ಆಸರೆ ಚಾರಿಟೇಬಲ್ ಟ್ರಸ್ಟ್ ಈಗಾಗಲೇ ಶೈಕ್ಷಣಿಕ ನಿಧಿ ಸ್ಥಾಪಿಸಿ ತಂದೆ ಮತ್ತು ತಾಯಿ ಕಳಕೊಂಡ 25 ಅವಕಾಶ ವಂಚಿತ ಮಕ್ಕಳ ಶೈಕ್ಷಣಿಕ ಸಹಕಾರ, ಕೋವಿಡ್ ಸಂದರ್ಭದಲ್ಲಿ ಸತತ 60 ದಿನಗಳ ಕಾಲ ನಿರ್ಗತಿಕರಿಗೆ, ಕೂಲಿ ಕಾರ್ಮಿಕರನ್ನು ಸೇರಿ 96000 ಮಂದಿಗೆ ಅನ್ನದಾನ, ಕೋವಿಡ್ ಸಂದರ್ಭದಲ್ಲಿ ಕಿಟ್ ವಿತರಣೆ, ಅಂಗನವಾಡಿ ಕಾರ್ಯಕರ್ತರಿಗೆ ತಲಾ ರೂ 2000 ಧನಸಹಾಯ, ಉಡುಪಿ ನಗರದಲ್ಲಿ ಪ್ರಯಾಣಿಕರಿಗೆ ಉಚಿತ 12 ಬಸ್ಸು, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮನೆಗಳ ದುರಸ್ತಿಗೆ ಸಹಕಾರ, ನೂರಾರು ಮಂದಿಗೆ ಆರೋಗ್ಯ ನಿಧಿ ಮತ್ತು ನಿರಂತರ ಸಾಮಾಜಿಕ ಚಟುವಟಿಕೆ ನಡೆಸಿಕೊಂಡು ಉಡುಪಿ ನಗರದ ವಿದ್ಯುತ್ ಇಲ್ಲದ ಎಲ್ಲಾ ಬಡವರ ಮನೆಗಳನ್ನು ಸಂಪರ್ಕಿಸಿ ಉಚಿತ ವಿದ್ಯುತ್ ಸಂಪರ್ಕ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ.

2022ರ ಒಳಗೆ ಉಡುಪಿ ನಗರ 100 ಶೇಕಡಾ ವಿದ್ಯುತ್ ಹೊಂದಿದ ದೇಶದ ಪ್ರಪ್ರಥಮ ನಗರ ಆಗುವಂತೆ ಆಸರೆ ಚಾರಿಟೇಬಲ್ ಟ್ರಸ್ಟ್ ಸತತ ಪ್ರಯತ್ನ ಮಾಡುತ್ತಿದೆ. ನವೆಂಬರ್ 03 ಬುಧವಾರ ದೀಪಾವಳಿ ಹಬ್ಬದಂದು ಉಡುಪಿ ಪುತ್ತೂರು, ಕೊಡವೂರು, ಇಂದ್ರಾಳಿ, ಮಂಚಿ ಕುಮೇರಿ ಸಹಿತ 6 ಬಡವರ ಮನೆಗೆ ಉಚಿತ ವಿದ್ಯುತ್ ಸಂಪರ್ಕ ನೀಡುವುದರ ಮುಖೇನ 100ನೇ ಮನೆಯನ್ನು ಇಂದ್ರಾಳಿ ಮಂಚಿ ಕುಮೇರಿ ಕೊರಗ ಸಮುದಾಯ ಭವನದ ಬಳಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ ಸುನೀಲ್ ಕುಮಾರ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಕೆ. ರಘುಪತಿ ಭಟ್, ಉಡುಪಿ ನಗರಸಭೆ ಅಧ್ಯಕ್ಷರಾದ ಸುಮಿತ್ರಾ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಜಾನಪದ ವಿದ್ವಾಂಸ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್, ಸ್ಥಳೀಯ ನಗರಸಭಾ ಸದಸ್ಯರುಗಳಾದ ಅಶೋಕ್ ನಾಯ್ಕ್, ವಿಜಯ್ ಕೊಡವೂರು, ಜಯಂತಿ ಪೂಜಾರಿ ಉಪಸ್ಥಿತರಿದ್ದು, ಆಸರೆ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಪ. ವಸಂತ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ರಾಘವೇಂದ್ರ ಕಿಣಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರತನ್ ಟಾಟಾ ವಿಧಿವಶ

ಮುಂಬಯಿ, ಅ.10: ಟಾಟಾ ಸನ್ಸ್‌ನ ರತನ್ ಟಾಟಾ ಬುಧವಾರ ನಿಧನರಾದರು. ಅವರಿಗೆ...

ಅ.11: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ

ಉಡುಪಿ, ಅ.9: ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 11 ರಂದು ನಗರ...

ಯುವಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

ಉಡುಪಿ, ಅ.9: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹ ಕಾರ್ಯಚಟುವಟಿಕೆಗಳಲ್ಲಿ...

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ

ಉಡುಪಿ, ಅ.9: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ...
error: Content is protected !!