Saturday, September 21, 2024
Saturday, September 21, 2024

ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳಿಗೆ ಕಾರ್ಯಗಾರ

ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳಿಗೆ ಕಾರ್ಯಗಾರ

Date:

ಮಣಿಪಾಲ: ಪಡಿ ಸಂಸ್ಥೆ ಮಂಗಳೂರು ಮತ್ತು 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ’ಮಕ್ಕಳ ಶಿಕ್ಷಣ, ಆರೋಗ್ಯ ಮತ್ತಯ ರಕ್ಷಣೆಯಲ್ಲಿ ಸ್ಥಳೀಯ ಸರಕಾರದ ಜವಾಬ್ದಾರಿಗಳು’ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳಿಗೆ ತರಬೇತಿ ಕಾರ್ಯಗಾರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಆಶಯ ಗೀತೆಯೊಂದಿಗೆ ಪ್ರಾರಂಭಿಸಲಾಯಿತು.

ಈಗಾಗಲೇ ಒಂದನೇ ಹಂತದ ತರಬೇತಿ ಮತ್ತು ಮೌಲ್ಯಮಾಪನ ಮುಗಿಸಿದ್ದು, 80ಬಡಗುಬೆಟ್ಟು ಗ್ರಾಮ ಪಂಚಾಯತ್ ಮಕ್ಕಳ ಶಿಕ್ಷಣ ಮತ್ತು ಆರೋಗ್ಯ ವಿಚಾರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಒಂದು ತರಬೇತಿಯ ಮುಖ್ಯ ಉದ್ದೇಶ, ಸ್ಥಳೀಯ ಸರಕಾರವು ಮಕ್ಕಳ ಶಿಕ್ಷಣ ಮತ್ತು ರಕ್ಷಣೆಗೆ ಸಂಬಂಧಪಟ್ಟ ಸರಕಾರದ ಸುತ್ತೋಲೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನವಾಗುವಂತೆ ಮಾಡುವುದು. ಕೋವಿಡ್-19ರಿಂದ ಮಕ್ಕಳಿಗೆ ಸೋಂಕು ಹರಡದಂತೆ ಮತ್ತು ಮಕ್ಕಳ ಶಿಕ್ಷಣ, ರಕ್ಷಣೆ, ಹಾಗು ಆರೋಗ್ಯಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಮಾಡುವುದು ಎಂದು ಪಡಿ ಸಂಸ್ಥೆಯ ಉಡುಪಿ ಜಿಲ್ಲಾ ಸಂಯೋಜಕ ವಿವೇಕ್ ಹೇಳಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಇವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ರಕ್ಷಣೆಯಲ್ಲಿ ಗ್ರಾಮ ಪಂಚಾಯತ್ ಪಾತ್ರ ಬಹಳಷ್ಟಿದೆ. ಈಗಾಗಲೇ 80 ಬಡಗುಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಲಾಗಿದೆ. ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಸಮಿತಿ ಈಗಾಗಲೇ ರಚಿಸಲಾಗಿದ್ದು ಸಭೆ ನಡೆಸುವುದರ ಬಗ್ಗೆ ಕ್ರಮ ವಹಿಸಲಾಗಿದೆ. ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಧವಿ ಎಸ್ ಆಚಾರ್ಯ ಇವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ರಕ್ಷಣೆಗೆ ಸಂಬಂಧಿಸಿದ ಈ ತರಬೇತಿ ತುಂಬಾ ಅಗತ್ಯವಿದೆ. ಶಿಕ್ಷಣ ಹಕ್ಕು ಕಾಯಿದೆ- 2009ರ ಸಮರ್ಪಕವಾಗಿ ಅನುಷ್ಠಾನ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಎಚ್ ಜಯವಂತ ರಾವ್ ಇವರು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರಿಗೆ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ರಕ್ಷಣೆಯಲ್ಲಿ ಸ್ಥಳೀಯ ಸರಕಾರದ ಜವಾಬ್ದಾರಿಗಳು, ಈ ವಿಷಯವಾಗಿ ತರಬೇತಿ ನೀಡಿದರು. ಮೊದಲ ಅಧಿವೇಶನದಲ್ಲಿ ಹಿಂದಿನ ತರಬೇತಿಯ ಬಗ್ಗೆ ಪುನರ್ ಮನನ ಮಾಡಲಾಯಿತು.

ಎರಡನೇ ಅಧಿವೇಶನದಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕಾವಲು ಸಮಿತಿ, ಗ್ರಾಮ ಪಂಚಾಯತ್ ಶಿಕ್ಷಣ ಕಾರ್ಯಪಡೆ, ಕೆ.ಡಿ.ಪಿ ಸಭೆಯ ಕುರಿತು ಗುಂಪು ಚರ್ಚೆ ನಡೆಸಿದರು ಮತ್ತು ಮೂರನೇ ಅಧಿವೇಶನದಲ್ಲಿ ಕೊರೋನ ಮುಕ್ತ ಸಮಾಜದಲ್ಲಿ ಮಕ್ಕಳು ಮತ್ತು ಸ್ಥಳೀಯ ಸರಕಾರದ ಜವಾಬ್ದಾರಿಗಳು ಇದರ ಕುರಿತು ಮೂರು ಗುಂಪು ಮಾಡಿ ಚರ್ಚಿಸಲಾಯಿತು. ಕೊನೆಯಲ್ಲಿ ತರಬೇತಿಯ ಆಧಾರದ ಮೇಲೆ ಕ್ರಿಯಾ ಯೋಜನೆ ತಯಾರಿಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಿರುಪಮಾ ಎಸ್ ಹೆಗ್ಡೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಅಶೋಕ್ ಕುಮಾರ್, ಕಾರ್ಯದರ್ಶಿ ಶಕುಂತಲಾ, ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಜೊತೆ ಕಾರ್ಯದರ್ಶಿ ವಾಸು ಆಚಾರ್, ಗ್ರಾಮ ಪಂಚಾಯತ್ ಸರ್ವ ವಸದಸ್ಯರು, ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ‌ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಮ್.ಸಿ ಸದಸ್ಯರು, ಪಡಿ ಸಂಸ್ಥೆ ಮಂಗಳೂರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ವೈದ್ಯಕೀಯ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎ.ಎನ್ ಎಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!