Thursday, October 10, 2024
Thursday, October 10, 2024

ಸಂಜಿತ್ ಎಂ ದೇವಾಡಿಗ ಅವರಿಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪ್ರಶಸ್ತಿ

ಸಂಜಿತ್ ಎಂ ದೇವಾಡಿಗ ಅವರಿಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪ್ರಶಸ್ತಿ

Date:

ಉಡುಪಿ: ಕಾರ್ಕಳ ತಾಲೂಕು ಅಜೆಕಾರು ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕುಂದಾಪುರದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಂ ದೇವಾಡಿಗ ಇವರು ಆಯ್ಕೆಯಾಗಿರುತ್ತಾರೆ.

ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಸಂಜಿತ್ ಎಂ ದೇವಾಡಿಗ ಗಂಗೊಳ್ಳಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಉಪನ್ಯಾಸಕಿಯಾಗಿರುವ ಸಾವಿತ್ರಿ ದೇವಾಡಿಗ ಇವರ ಪುತ್ರ.

ನವೆಂಬರ್ 14 ರಂದು ಮಧ್ಯಾಹ್ನ ಅಜೆಕಾರಿನಲ್ಲಿ ಒಟ್ಟು 30 ಪ್ರತಿಭಾನ್ವಿತ ಮಕ್ಕಳಿಗೆ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಉಪಸ್ಥಿತಿಯಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುವುದು ಎಂದು ಸಂಚಾಲಕರಾದ ಡಾ.ಶೇಖರ ಅಜೆಕಾರು ಅವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಿಎಂ ಕಪ್ ಬಾಕ್ಸಿಂಗ್‌: ಅನುಶ್ರೀ ನಾಯ್ಕ್ ಅವರಿಗೆ ಬೆಳ್ಳಿ ಪದಕ

ಮಣಿಪಾಲ, ಅ.10: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ರಾಜ್ಯಮಟ್ಟದ...

ರೆಡ್‌ಕ್ರಾಸ್ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

ಉಡುಪಿ, ಅ.10: ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ಪ್ರಥಮ ಚಿಕಿತ್ಸಾ ಪಾತ್ರ...

ಶ್ರೀಕೃಷ್ಣ ಮಠಕ್ಕೆ ಸುಬ್ರಹ್ಮಣ್ಯ ಶ್ರೀ ಭೇಟಿ

ಉಡುಪಿ, ಅ.10: ಶ್ರೀ ವೇದವ್ಯಾಸ ಪ್ರತಿಷ್ಠಾಪನೆಯ ದಿನದಂದು ಶ್ರೀ ವ್ಯಾಸಮುಷ್ಟಿಯ ಆರಾಧಕರಾದ...

ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಅ.10: ಕುಂದಗನ್ನಡ ಸಮೃದ್ಧವಾದ ಭಾಷೆ. ಈ ಭಾಷೆಯೊಂದಿಗೆ ಬೆಸೆದುಕೊಂಡ ಸಂಸ್ಕೃತಿ...
error: Content is protected !!