Friday, September 20, 2024
Friday, September 20, 2024

ಯುವವಾಹಿನಿ (ರಿ.) ಉಡುಪಿ ವತಿಯಿಂದ ಬನ್ನಂಜೆ ಬಾಬು ಅಮೀನ್ ರವರಿಗೆ ಸನ್ಮಾನ

ಯುವವಾಹಿನಿ (ರಿ.) ಉಡುಪಿ ವತಿಯಿಂದ ಬನ್ನಂಜೆ ಬಾಬು ಅಮೀನ್ ರವರಿಗೆ ಸನ್ಮಾನ

Date:

ಉಡುಪಿ: ಯುವವಾಹಿನಿ ಉಡುಪಿ ಘಟಕದ ವತಿಯಿಂದ ದೀಪಾವಳಿ ಸಂಭ್ರಮ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಜಾನಪದ ವಿದ್ವಾಂಸ ನಡೆದಾಡುವ ಗರೋಡಿ ಖ್ಯಾತಿಯ ಬನ್ನಂಜೆ ಬಾಬು ಅಮೀನ್ ರವರಿಗೆ ಸನ್ಮಾನ ಕಾರ್ಯಕ್ರಮ ಜರಗಿತು.

ಘಟಕದ ಅಧ್ಯಕ್ಷರಾದ ಪ್ರವೀಣ್ ಪೂಜಾರಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಸಾಮೂಹಿಕ ಗುರು ಸ್ತುತಿಃಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.

ಬಳಿಕ ಮಾತನಾಡಿದ ಬನ್ನಂಜೆ ಬಾಬು, ಈ ಪ್ರಶಸ್ತಿ ತುಳುನಾಡಿನ ಸಮಸ್ತ ಜನರಿಗೆ ಅರ್ಪಣೆ ಎಂದರು. ದೀಪಾವಳಿ ಆಚರಣೆ ಬಗ್ಗೆ ಅವರು ವಿಸ್ತ್ರತವಾಗಿ ಮಾತನಾಡಿದರು.

ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಹಿಳಾ ಸದಸ್ಯರನ್ನು ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು. ಮಾಜಿ ಅಧ್ಯಕ್ಷರಾದ ಗುರುದತ್ ಅಮೀನ್ ಶುಭ ಹಾರೈಸಿದರು.

ಕಾರ್ಯದರ್ಶಿ ದಯಾನಂದ ಕರ್ಕೇರ, ಮಹಿಳಾ ಸಂಚಾಲಕಿ ರೋಶನಿ ಹಾಗೂ ಕಾರ್ಯಕ್ರಮದ ಸಂಚಾಲಕರಾದ ವೀಕ್ಷಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಮಿತಾಂಜಲಿ‌ ಕಿರಣ್ ಸನ್ಮಾನಪತ್ರ ವಾಚಿಸಿದರು. ಶ್ರೀಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!