Sunday, October 13, 2024
Sunday, October 13, 2024

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

Date:

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಹಾಗೂ ಭಾರತೀಯ ವೈದ್ಯಕೀಯ ಸಂಘ ಕರಾವಳಿ ಉಡುಪಿ ಇವುಗಳ ಸಹಯೋಗದೊಂದಿಗೆ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಉಡುಪಿ ಐಎಂಎ ಭವನದಲ್ಲಿ ಆಯೋಜಿಸಲಾಗಿತ್ತು.

ಶಿಬಿರವನ್ನು ಉದ್ಘಾಟಿಸಿದ ಭಾರತೀಯ ವೈದ್ಯಕೀಯ ಸಂಘ ಕರಾವಳಿ ಉಡುಪಿ ಅಧ್ಯಕ್ಷ ಡಾ.ಕೆ.ವಿನಾಯಕ ಶೆಣೈ ಮಾತನಾಡಿ, ವೈದ್ಯರು ಮನುಷ್ಯರ ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿದರೆ, ಮಾಧ್ಯಮಗಳು ಸಾಮಾಜಿಕ ಆರೋಗ್ಯವನ್ನು ಕಾಪಾಡುತ್ತದೆ.

ಈ ಎರಡೂ 24ಗಂಟೆಗಳ ಜನರ ಸೇವೆ ಮಾಡುವ ವೃತ್ತಿಯಾಗಿವೆ. ಸ್ವಾತಂತ್ರ್ಯ ಚಳವಳಿ ಸೇರಿದಂತೆ ದೇಶದ ಅಭಿವೃದ್ಧಿಯಲ್ಲಿ ಮಾಧ್ಯಮ ಸಾಕಷ್ಟು ಮುಖ್ಯ ಪಾತ್ರವನ್ನು ವಹಿಸಿದೆ ಎಂದರು.

ಮಣಿಪಾಲ ಕೆಎಂಸಿಯ ಹೃದ್ರೋಗ ತಜ್ಞ ಡಾ.ಅಬ್ದುಲ್ ರಝಾಕ್ ಮಾತನಾಡಿ, ರಕ್ತನಾಳದಲ್ಲಿ ಕೊಬ್ಬಿನಾಂಶ ಹೆಚ್ಚಾಗಿ ದಿಢೀರನೇ ಬ್ಲಾಕ್ ಆಗುವುದುರಿಂದ ಹೃದಯಾಘಾತ ಸಂಭವಿಸುತ್ತದೆ. ಆದುದರಿಂದ ಇದನ್ನು ನಾವು ಅತ್ಯಂತ ಶೀಘ್ರವಾಗಿ ಪತ್ತೆ ಹಚ್ಚಬೇಕು.

ಹೃದಯದಲ್ಲಿ ಕಂಡು ಬರುವ ರೋಗಗಳನ್ನು ಗ್ಯಾಸ್ಟಿಕ್ ಸಮಸ್ಯೆ ಎಂಬುದಾಗಿ ನಿರ್ಲಕ್ಷ ಮಾಡದೆ ವೈದ್ಯರನ್ನು ಸಂಪರ್ಕಿಸಬೇಕು. ಕಾಲಕಾಲಕ್ಕೆ ಹೃದಯ ಪರೀಕ್ಷೆ ಮಾಡುವುದರಿಂದ ಹೃದಯಾಘಾತಗಳನ್ನು ತಪ್ಪಿಸಬಹುದಾಗಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಉಡುಪಿ ವಾರ್ತಾಧಿಕಾರಿ ಮಂಜುನಾಥ್, ಭಾರತೀಯ ವೈದ್ಯಕೀಯ ಸಂಘ ಉಡುಪಿ ಪ್ರಧಾನ ಕಾರ್ಯದರ್ಶಿ ಡಾ. ಗಣಪತಿ ಹೆಗಡೆ, ಮಣಿಪಾಲ ಕೆಎಂಸಿಯ ಮಾರ್ಕೆಟಿಂಗ್ ವಿಭಾಗದ ಮುಖ್ಯ ವ್ಯವಸ್ಥಾಪಕ ಸಚಿನ್ ಕಾರಂತ್, ವ್ಯವಸ್ಥಾಪಕ ಮೋಹನ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ಉಡುಪಿ ಪತ್ರಿಕಾ ಭವನದ ಸಂಚಾಲಕ ಸುಭಾಶಚಂದ್ರ ವಾಗ್ಳೆ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತೆ ಪಲ್ಲವಿ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.

ಶಿಬಿರದಲ್ಲಿ ಜನರಲ್ ಮೆಡಿಸಿನ್, ಹೃದಯ, ಚರ್ಮ, ನೇತ್ರ, ಮೂಗು, ಕಿವಿ, ಗಂಟಲು, ಮೂಳೆ, ರಕ್ತದೊತ್ತಡ, ಮಧುಮೇಹ ಹಾಗೂ ಇಸಿಜಿ ಪರೀಕ್ಷೆಗಳನ್ನು ಮಾಡಲಾಯಿತು. ಶಿಬಿರದಲ್ಲಿ ಜಿಲ್ಲೆಯ 90ಕ್ಕೂ ಅಧಿಕ ಪತ್ರಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾತೃಹೃದಯಿ ರತನ್ ಟಾಟಾ

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ...

ಕಾರಂತ ದೀವಿಗೆ 2024

ಕುಂದಾಪುರ, ಅ.13: ಶ್ರೀ ಶಾರದಾ ಕಾಲೇಜು ಬಸ್ಸೂರು ಕುಂದಾಪುರ ಇಲ್ಲಿನ ಕನ್ನಡ...

ಮನಸ್ಸಿನಲ್ಲಿ ಸಹಾನುಭೂತಿ ನೆಲೆಸಲಿ: ವಿವೇಕ್ ಆಳ್ವ

ವಿದ್ಯಾಗಿರಿ, ಅ.13: ಮನೋವಿಜ್ಞಾನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಹಾನುಭೂತಿಯ ನೆಲೆಸಿರಬೇಕು ಎಂದು ಆಳ್ವಾಸ್...

ಒಟಿಟಿ ನಿಯಂತ್ರಿಸಲು ಕಠಿಣ ಕಾನೂನಿನ ಅಗತ್ಯವಿದೆ: ಆರ್.ಎಸ್.ಎಸ್. ಸರಸಂಘಚಾಲಕ್ ಮೋಹನ್ ಭಾಗವತ್

ನಾಗಪುರ, ಅ.13: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ ಉತ್ಸವ ನಾಗಪುರದಲ್ಲಿ ಶನಿವಾರ...
error: Content is protected !!