Monday, October 14, 2024
Monday, October 14, 2024

ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕನ್ನು ಎದುರಿಸಲು ಸಹಕರಿಸಿ: ಜಿಲ್ಲಾಧಿಕಾರಿ

ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕನ್ನು ಎದುರಿಸಲು ಸಹಕರಿಸಿ: ಜಿಲ್ಲಾಧಿಕಾರಿ

Date:

ಉಡುಪಿ: ಕೋವಿಡ್ ಸೋಂಕನ್ನು ಮುಂಬರುವ ದಿನಗಳಲ್ಲಿ ಎದುರಿಸಲು ಸರ್ಕಾರಿ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ನ ಕಳೆದ 2 ಅಲೆಗಳಲ್ಲಿ ಸರ್ಕಾರದ ಜೊತೆಗೆ ಖಾಸಗಿ ಆಸ್ಪತ್ರೆಗಳು ಅತ್ಯುತ್ತಮ ರೀತಿಯಲ್ಲಿ ಸ್ಪಂದಿಸಿ ಸೋಂಕಿತರಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡಿ ಎಲ್ಲಾ ರೀತಿಯ ಸಹಕಾರ ನೀಡಿವೆ. ಮುಂಬರುವ ದಿನಗಳಲ್ಲಿ ಇದೇ ರೀತಿಯ ಸಹಕಾರವನ್ನು ನೀಡುವುದರಿಂದ ಮುಂದಿನ ದಿನಗಳಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದರು.

ಆಯುಷ್ಮಾನ ಆರೋಗ್ಯ ಭಾರತ್ ಯೋಜನೆಯಡಿಯಲ್ಲಿ 5000 ಕ್ಕೂ ಹೆಚ್ಚು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಯನ್ನು ಖಾಸಗಿ ಆಸ್ಪತ್ರೆಗಳು ನೀಡಿರುವುದು ಪ್ರಶಂಸನೀಯ ಕಾರ್ಯ ಎಂದ ಅವರು, ಸರ್ಕಾರದಿಂದ ಚಿಕಿತ್ಸೆಯ ವೆಚ್ವವನ್ನು ಆದ್ಯತೆ ಮೇಲೆ ಭರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.

ಖಾಸಗಿ ಆಸ್ಪತ್ರೆಗಳು ಸಂಭಾವ್ಯ ಕೋವಿಡ್ ಸೋಂಕನ್ನು ಎದುರಿಸಲು ಅಗತ್ಯವಿರುವ ಎಲ್ಲಾ ರೀತಿಯ ವೈದ್ಯಕೀಯ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳಬೇಕು, 2 ನೇ ಅಲೆಯಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ಅಗತ್ಯವಿದ್ದ ಪ್ರಾಣವಾಯು ವಿನ ಸಮಸ್ಯೆ ರಾಜ್ಯದಲ್ಲಿ ಉಂಟಾಗಿದ್ದ ಹಿನ್ನಲೆ, ಆಕ್ಸಿಜನ್ ಸಂಗ್ರಹ ಮಾಡುವ ಜಂಬೋ ಸಿಲೆಂಡರ್, ಡ್ಯುರೋ ಸಿಲೆಂಡರ್ ಗಳನ್ನು ಅವಶ್ಯಕತೆಗೆ ತಕ್ಕಂತೆ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿ ಶೇ. 95 ರಷ್ಟು ಜನ ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದಾರೆ ಶೇ.5ರಷ್ಟು ಜನರು ಇತರೆ ಸಾಮಾನ್ಯ ಕಾಯಿಲೆ, ಗರ್ಭಿಣಿಯರು, ಸೇರಿದಂತೆ ಮತ್ತಿತರರು ಲಸಿಕೆ ಪಡೆಯದೇ ಇರುವುದು ಕಂಡು ಬಂದಿರುತ್ತದೆ ಅವರಿಗೆ ಲಸಿಕೆ ಪಡೆಯಲು ವೈದ್ಯರುಗಳು ಶಿಫಾರಸು ಮಾಡಬೇಕೆಂದು ಸೂಚನೆ ನೀಡಿದರು.

ಕೋವಿಡ್ ಸೋಂಕಿನ ಚಿಕಿತ್ಸೆ, ಆಕ್ಸಿಜಿನ್ ಬಳಕೆ, ಸೇರಿದಂತೆ ಅಗತ್ಯವಿರುವ ಚಿಕಿತ್ಸಾ ವಿಧಾನಗಳ ಬಗ್ಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರಿಗೆ ತರಬೇತಿ ಕಾರ್ಯಗಾರಗಳನ್ನು ಕೆಎಂಸಿ ಸಹಕಾರದೊಂದಿಗೆ ಆಯೋಜಿಸಬೇಕೆಂದು ಸೂಚಿಸಿದರು.

ಜಿಲ್ಲೆಯ ಪ್ರತಿಯೊಂದು ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಅಡಿಯಲ್ಲಿ ನೊಂದಣಿ ಆಗುವಾಗ ನಮೂದಿಸಿರುವ ಬೆಡ್‌ಗಳ ಸಂಖ್ಯೆ ಸೇರಿದಂತೆ ಮತ್ತಿತರೆ ಮಾರ್ಪಾಡು ಮಾಡಿರುವ ಅಗತ್ಯ ಮಾಹಿತಿಗಳನ್ನು ಪ್ರಾಧಿಕಾರಕ್ಕೆ ನೀಡಬೇಕು ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಮಾತನಾಡಿ, ಎಲ್ಲ ಖಾಸಗಿ ಅಸ್ಪತ್ರೆಗಳ ವೈದ್ಯರು ತಮ್ಮಲ್ಲಿಗೆ ಬರುವ ಜ್ವರ ಶೀತ ಕೆಮ್ಮು ಪ್ರಕರಣಗಳ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಸೂಚನೆ ನೀಡಬೇಕು, ಎಲ್ಲಾ ವೈದ್ಯಕೀಯ ಉಪಕರಣಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಪರಿಶೀಲಿಸಿಕೊಳ್ಳಬೇಕು, ಅಗ್ನಿ ಸುರಕ್ಷಾ ಉಪಕರಣಗಳು ಸೇರಿದಂತೆ ಮತ್ತಿತರ ಮುಂಜಾಗ್ರತಾ ಕ್ರಮಗಳ ಬಗ್ಗೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಕೋವಿಡ್ ನೋಡಲ್ ಅಧಿಕಾರಿ ಡಾ. ಪ್ರಶಾಂತ ಭಟ್, ಡಾ. ಶ್ರೀರಾಮ ರಾವ್ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತೆಗಳ ವೈದ್ಯರು ಹಾಗೂ ಖಾಸಗಿ ಅಸ್ಪತ್ರೆಗಳಿಗೆ ನಿಯೋಜಿಸಿದ್ದ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...

ಕುಂದಾಪುರ: ಮಳೆಯಿಂದ ಮನೆಗೆ ಹಾನಿ

ಉಡುಪಿ, ಅ.14: ಕಾರ್ಕಳದಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ 31.3 ಮಿಮೀ ಮಳೆಯಾಗಿದೆ. ಕುಂದಾಪುರ-14...

ಟೀಮ್ ಭವಾಬ್ಧಿ: ಗೋವಿನೆಡೆಗೆ ನಮ್ಮ ಕೊಡುಗೆ

ಕೋಟ, ಅ.14: ಟೀಮ್ ಭವಾಬ್ಧಿ ಕೋಟತಟ್ಟು ಪಡುಕರೆ ವತಿಯಿಂದ ಗೋವಿನೆಡೆಗೆ ನಮ್ಮ...

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಬೆಳಗಾವಿ, ಅ.13: ಸವದತ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ...
error: Content is protected !!