Tuesday, October 15, 2024
Tuesday, October 15, 2024

ಯುವಕ ಮಂಡಲ (ರಿ.) ಇರಾ: 48 ನೇ ವಾರ್ಷಿಕೋತ್ಸವ

ಯುವಕ ಮಂಡಲ (ರಿ.) ಇರಾ: 48 ನೇ ವಾರ್ಷಿಕೋತ್ಸವ

Date:

ಬಂಟ್ವಾಳ: ಯುವಕ ಮಂಡಲ (ರಿ.) ಇರಾ ಇದರ 48 ನೇ ವಾರ್ಷಿಕೋತ್ಸವ ಯುವಕ ಮಂಡಲದ ವಠಾರದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಯುವಕ ಮಂಡಲ(ರಿ.) ಇರಾ ಅಧ್ಯಕ್ಷರಾದ ಪ್ರಸೀನ್ ಶೆಟ್ಟಿ ಆಚೆಬೈಲು ಮಾತನಾಡಿ, ಇರಾ ಯುವಕ‌ ಮಂಡಲದ ಮುಂಬರುವ ಕಾರ್ಯಚಟುವಟಿಕೆಗಳ ಮಾಹಿತಿ ನೀಡಿದರು. ಶ್ರೀ ಅರಸು ಕುರಿಯಾಡಿತ್ತಾಯಿ ಮೂವರು ದೈವಂಗಳ ಅರಸು ಕೊಡೆಯ ಚಾಕರಿಯವರಾದ ಜನಾರ್ಧನ ಸಪಲ್ಯ ಗಾಣದ ಕೊಟ್ಯ ಕೆಂಜಿಲ ಅವರನ್ನು ಸನ್ಮಾನಿಸಲಾಯಿತು.

ದ.ಕ.ಜಿ.ಪ.ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿಯರಾದ ಸುಜಾತ ಟಿ.ಎಸ್ ಹಾಗೂ ಸೌಮ್ಯ ಯೋಗೀಶ್ ಆಚಾರ್ಯ ಅವರನ್ನು ಗೌರವಿಸಲಾಯಿತು.

ಅತಿಥಿಗಳಾಗಿ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಗ್ನೇಸ್ ಡಿ’ಸೋಜ, ತಾಲೂಕ್ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಹಾಸ್ ಆರ್ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಪ್ರಶಾಂತ್ ಕಾಜವ, ಪದ್ಮಶ್ರೀ ಸೋಲಾರ್ ಸಿಸ್ಟಮ್ ಪುತ್ತೂರು ಇದರ ಮಾಲಕರಾದ ಸೀತಾರಾಮ ರೈ ಕೆದಂಬಾಡಿಗುತ್ತು, ಯುವ ಉದ್ಯಮಿ ವಿಜೇಶ್ ನಾಯಕ್ ನಾರ್ಯ ನಡಿಗುತ್ತು, ಲಯನ್ಸ್ ಕ್ಲಬ್ ಮುಡಿಪು ಕುರ್ನಾಡು ಅಧ್ಯಕ್ಷರಾದ ರವಿ ರೈ ಪಜೀರು, ಯುವಕ ಮಂಡಲದ ಸ್ಥಾಪಕ ಸದಸ್ಯರುಗಳಾದ ವಾಮನ ಪೂಜಾರಿ ತಾಳಿತ್ತಬೆಟ್ಟು, ಜಾರಪ್ಪ ಕುಲಾಲ್ ಸೂತ್ರಬೈಲು ಉಪಸ್ಥಿತರಿದ್ದರು.

ನಿಖಿಲ್ ಕೊಟ್ಟಾರಿ ಸಂಘದ ವಾರ್ಷಿಕ ವರದಿ ವಾಚಿಸಿದರು. ಪುಷ್ಪರಾಜ ಕುಕ್ಕಾಜೆ ಸನ್ಮಾನಿತರನ್ನು ಪರಿಚಯಿಸಿದರು. ನಿತೇಶ್ ಶೆಟ್ಟಿ ಸ್ವಾಗತಿಸಿ, ಅಶ್ವಿತ್ ಕೊಟ್ಟಾರಿ ವಂದಿಸಿದರು.‌ ಯತಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯುವಕ ಮಂಡಲದ ಸದಸ್ಯರಿಂದ ಯಕ್ಷಗಾನ ನಾಟ್ಯ ವೈವಿದ್ಯ ನಡೆಯಿತು. ಲಕುಮಿ ತಂಡದ ಪ್ರಸಿದ್ಧ ನಾಟಕ ’ಎನ್ನ ಬಂಗ ಎಂಕೆ ಗೊತ್ತು’ ಪ್ರದರ್ಶನಗೊಂಡಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!