Tuesday, October 15, 2024
Tuesday, October 15, 2024

ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ನೀಡುವಲ್ಲಿ ಉನ್ನತಿ ಕ್ಯಾರಿಯರ್ ಅಕಾಡೆಮಿ ಕಾರ್ಯ ಶ್ಲಾಘನೀಯ: ಡಾ. ರೋಶನ್ ಕುಮಾರ್ ಶೆಟ್ಟಿ

ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ನೀಡುವಲ್ಲಿ ಉನ್ನತಿ ಕ್ಯಾರಿಯರ್ ಅಕಾಡೆಮಿ ಕಾರ್ಯ ಶ್ಲಾಘನೀಯ: ಡಾ. ರೋಶನ್ ಕುಮಾರ್ ಶೆಟ್ಟಿ

Date:

ಉಡುಪಿ: ಉದ್ಯೋಗಾಧಾರಿತ ತರಬೇತಿಗಳಿಗೆ ಪ್ರಸಿದ್ಧಿ ಪಡೆದಿರುವ ಉನ್ನತಿ ಕ್ಯಾರಿಯರ್ ಅಕಾಡೆಮಿಯಲ್ಲಿ ಇಂದು “ಕೌಶಲ್ಯಾಭಿವೃದ್ಧಿಯಿಂದ ಯುವ ಸಬಲೀಕರಣ”ದ ಕುರಿತು ಕಾರ್ಯಕ್ರಮ ನಡೆಯಿತು.

ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿಯವರು ಭಾಗವಹಿಸಿ ಮಾತನಾಡುತ್ತಾ, ಇಂದಿನ ಯುವಜನರು ಉದ್ಯೋಗಕ್ಕೆ ಬೇಕಾಗುವ ಕೌಶಲ್ಯ ವೃದ್ಧಿಸಿಕೊಂಡರೆ ಉದ್ಯೋಗ ಗಿಟ್ಟಿಸಲು ಹಲವಾರು ಅವಕಾಶಗಳಿವೆ. ಆಪ್ಟಿಟ್ಯೂಡ್, ಲಾಜಿಕಲ್ ರೀಸನಿಂಗ್, ಇಂಗ್ಲಿಷ್ ಕಮ್ಯುನಿಕೇಶನ್ ನಂತಹ ಅನೇಕ ಕೌಶಲ್ಯಗಳು ಅತಿ ಅವಶ್ಯಕ.

ಉನ್ನತಿ ಕ್ಯಾರಿಯರ್ ಅಕಾಡೆಮಿಯು ಉಡುಪಿಯಲ್ಲಿ ಇಂತಹ ಒಂದು ಉತ್ತಮ ಸಂಸ್ಥೆ ಸ್ಥಾಪಿಸುವ ಮೂಲಕ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳನ್ನು ಒದಗಿಸುತ್ತಿರುವುದು ಶ್ಲಾಘನೀಯ ಎಂದರು.

ಇಂಟರ್ನ್ಷಿಪ್ ನಿಂದ ಉದ್ಯೋಗ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, ನಿರ್ದೇಶಕಿ ಪೌರ್ಣಮಿ ಪ್ರೇಮ್ ಶೆಟ್ಟಿ ಉಪಸ್ಥಿತರಿದ್ದರು.

ತರಬೇತುದಾರ ನವೀನ್, ಪಿಆರ್ ಓ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು. ಪ್ರಿಯ ಮೂಲ್ಯ ಸ್ವಾಗತಿಸಿ, ಸೌಮ್ಯ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!