Tuesday, October 15, 2024
Tuesday, October 15, 2024

ಕೋಡಿ ವಿಶ್ವನಾಥ ಗಾಣಿಗರಿಗೆ ಕಾರ್ಕಡ ಶ್ರೀನಿವಾಸ ಉಡುಪ ಪ್ರಶಸ್ತಿ

ಕೋಡಿ ವಿಶ್ವನಾಥ ಗಾಣಿಗರಿಗೆ ಕಾರ್ಕಡ ಶ್ರೀನಿವಾಸ ಉಡುಪ ಪ್ರಶಸ್ತಿ

Date:

ಕೋಟ: ಪ್ರಪ್ರಥಮ ಯಕ್ಷಗಾನವನ್ನು ವಿದೇಶಕೊಯ್ದ ದಾಖಲೆಯ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕರಲ್ಲೊಬ್ಬರಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ರಂಗನಟ, ಸಾಹಿತಿ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣ 2022 ರ ಪ್ರಶಸ್ತಿಯನ್ನು ಯಕ್ಷಗಾನದ ನಡುತಿಟ್ಟಿನ ಹಾರಾಡಿ ಶೈಲಿಯ ಹಿರಿಯ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ ಪ್ರದಾನ ಮಾಡಲಾಗುವುದೆಂದು ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆ, ಕಾರ್ಯಾಧ್ಯಕ್ಷ ಮಹೇಶ ಉಡುಪ ಮಂದರ್ತಿ, ಅಧ್ಯಕ್ಷ ಬಲರಾಮ ಕಲ್ಕೂರ, ಉಪಾಧ್ಯಕ್ಷ ಜನಾರ್ದನ ಹಂದೆಯವರನ್ನೊಳಗೊಂ ಸಮಿತಿ ನಿರ್ಧರಿಸಿದೆ.

ಕಮಲಶಿಲೆ ಮೇಳದಲ್ಲಿ ಗೆಜ್ಜೆ ಕಟ್ಟಿ, ಅಮೃತೇಶ್ವರಿ, ಸಾಲಿಗ್ರಾಮ, ಹಾಲಾಡಿ, ಸೌಕೂರು ಮೇಳಗಳಲ್ಲಿ ಕರ್ಣ, ಜಾಂಬವ, ಅರ್ಜುನ, ಶಲ್ಯ, ರಾವಣ, ಕಂಸ, ಶೂರಸೇನ, ಈಶ್ವರ, ಕಾಲನೇಮಿ, ಶುಂಭ, ಮಧುಕೈಟಭ, ಅತಿಕಾಯ ಮೊದಲಾದ
ಪಾತ್ರಗಳನ್ನು ನಿರ್ವಹಿಸಿದ ವಿಶ್ವನಾಥರು, ಅಟ್ಟೆ ಮುಂಡಾಸು ಕಟ್ಟುವುದರಲ್ಲಿ ದಾಖಲೆ ನಿರ್ಮಿಸಿದವರು.

ಹಳೆಯ ಹಾಗೂ ಹೊಸ ಪ್ರಸಂಗಗಳೆರಡರಲ್ಲು ಎತ್ತರದ ಶರೀರ ಮತ್ತು ಶಾರೀರದ ಕೋಡಿಯವರು ಹಿತ ಮಿತ ಮಾತು, ಗತ್ತಿನ ಕುಣಿತಗಳಿಂದ ಆಟ-ಜೋಡಾಟದ ರಂಗಸ್ಥಳದಲ್ಲಿ ವಿಜೃಂಭಿಸಿದವರು. ಮುಂಬರುವ 2022 ರ ಫೆಬ್ರುವರಿ 2 ರಂದು ಕೋಟದ ಪಟೇಲರ ಮನೆಯಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಕೋಡಿಯವರಿಗೆ ಉಡುಪ ಪ್ರಶಸ್ತಿಯನ್ನಿತ್ತು ಗೌರವಿಸಲಾಗುವುದೆಂದು ಸಾಲಿಗ್ರಾಮ ಮಕ್ಕಳ ಮೇಳ ಟ್ರಸ್ಟ್ ಕಾರ್ಯದರ್ಶಿ ಸುಜಯೀಂದ್ರ ಹಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಡಿ ವಿಶ್ವನಾಥ ಗಾಣಿಗರಿಗೆ ಕಾರ್ಕಡ ಶ್ರೀನಿವಾಸ ಉಡುಪ ಪ್ರಶಸ್ತಿ ಮುಂಬರುವ 2022 ರ ಫೆಬ್ರುವರಿ 2 ರಂದು ಕೋಟದ ಪಟೇಲರ ಮನೆಯಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಕೋಡಿಯವರಿಗೆ ಉಡುಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೆಂಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ

ಯು.ಬಿ.ಎನ್.ಡಿ., ಅ.15: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು...

ಇಂಧನ ಇಲಾಖೆ: ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು, ಅ.15: ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ...

ಕಾವೇರಿ ತೀರ್ಥೋದ್ಭವ: ಪ್ಲಾಸ್ಟಿಕ್ ನಿಷೇಧ

ಮಡಿಕೇರಿ, ಅ.15: ಮಡಿಕೇರಿಯ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ...

ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ

ಬೆಂಗಳೂರು, ಅ.15: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ...
error: Content is protected !!