Monday, September 23, 2024
Monday, September 23, 2024

ಮಹಾಕವಿ ಭಾಸನ ಕರ್ಣಭಾರ ಏಕಾಂಕದ ಪ್ರಥಮ ಯಕ್ಷಗಾನ ಪ್ರದರ್ಶನ

ಮಹಾಕವಿ ಭಾಸನ ಕರ್ಣಭಾರ ಏಕಾಂಕದ ಪ್ರಥಮ ಯಕ್ಷಗಾನ ಪ್ರದರ್ಶನ

Date:

ಕೋಟ: ಕೋಟ ವ್ಯಾಪ್ತಿ ಕಲೆ, ಸಾಹಿತ್ಯ, ಧಾರ್ಮಿಕ ಸಂಸ್ಕಾರ ಮತ್ತು ಸಾಂಸ್ಕೃತಿಕ ವಿಚಾರಗಳಿಗೆ ಹೆಸರುವಾಸಿಯಾಗಿದೆ. ಆದರೆ ಈ ಎಲ್ಲ ಚಟುವಟಿಕೆಗಳು ರಂಗ ಮಂದಿರವನ್ನು ಬಿಟ್ಟು ಹೊರಗಡೆ ವಿಸ್ತರಿಸದೇ ಇರುವುದು ವಿಷಾದನೀಯ ಎಂದು ಬ್ರಹ್ಮಾವರ ತಾಲ್ಲೂಕಿನ ತಹಶೀಲ್ದಾರ್ ರಾಜಶೇಖರಮೂರ್ತಿ ಹೇಳಿದರು.

ಗುಂಡ್ಮಿ ಸಾಲಿಗ್ರಾಮದ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾ ಕೇಂದ್ರದ ಸದಾನಂದ ರಂಗ ಮಂಟಪದಲ್ಲಿ ಬೆಂಗಳೂರಿನ ಸಮಸ್ತರು ರಂಗ ಸಂಶೋಧನಾ ಸಂಸ್ಥೆ ವತಿಯಿಂದ ಭಾಸ ಮಹಾಕವಿಯ ಕರ್ಣಭಾರ ಏಕಾಂಕದ ಪ್ರಥಮ ಯಕ್ಷಗಾನ ಪ್ರದರ್ಶನವನ್ನು ಚಂಡೆ ಬಾರಿಸಿ ಉದ್ಘಾಟಿಸಿ ಮಾತನಾಡಿದರು.

ಬ್ರಹ್ಮಾವರ ಪರಿಸರದಲ್ಲಿ ಅಪಾರ ಸಾಹಿತ್ಯ ಭಂಡಾರ ಅಡಗಿದೆ. ಆದರೆ ಕರಾವಳಿಯ ಚಿಂತಕರ ಚಿಂತನೆಗಳು ಕರಾವಳಿಯನ್ನು ದಾಟಿ ಹೊರಗಡೆ ಹೋಗಿಲ್ಲ ಯಾಕೆ ಎನ್ನುವುದು ಪ್ರಶ್ನೆಯಾಗಿದೆ ಎಂದ ಅವರು, ಅತ್ಯಂತ ಪ್ರತಿಭಾಶಾಲಿ ವ್ಯಕ್ತಿಯಾಗಿದ್ದ ಕರ್ಣನ ಒಳ್ಳೆಯ ಗುಣವೇ ಅವನ ಮೃತ್ಯುವಿಗೆ ಕಾರಣವಾಗಿರುವುದನ್ನು ಹೊಸ ದೃಷಿಕೋನದಲ್ಲಿ ನೋಡಬೇಕು. ಅಲ್ಲದೇ ಹೊಸ ರೂಪ ನೋಡಲು ಓದುಗರ ಓದುವ ಸ್ಥಿತಿಯಲ್ಲಿ ಬದಲಾಗಬೇಕು ಎಂದರು.

ನಿವೃತ್ತ ಮುಖ್ಯೋಪಾಧ್ಯಾಯ ರಾಮಚಂದ್ರ ಐತಾಳ ಮಾತನಾಡಿ, ಕಲಾ ಕೇಂದ್ರಗಳು ಉತ್ತಮ ಸಂಸ್ಕಾರ ನೀಡುತ್ತಿದ್ದು, ಯುವ ಜನಾಂಗ ಹೆಚ್ಚು ಭಾಗವಹಿಸುವಂತಾಗಬೇಕು ಎಂದು ಹೇಳಿದರು.

ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರ‍ೀಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ, ಕೆನರಾ ಬ್ಯಾಂಕಿನ ಅಧಿಕಾರಿ ಕಾರ್ಕಡ ಸೀತಾರಾಮ ಸೋಮಯಾಜಿ, ಕಲಾ ಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ, ಉಪನ್ಯಾಸಕ ರಾಘವೇಂದ್ರ ತುಂಗ ಇದ್ದರು.

ಹಾಡಿಯಾಟ ಪ್ರಯೋಗ ಪ್ರಸಿದ್ದಿಯ ಗೋಪಾಲಕೃಷ್ಠ ನಾಯರಿ ಅವರು ಕರ್ಣಭಾರವನ್ನು ಬಡಗುತಿಟ್ಟಿನ ಯಕ್ಷಗಾನವನ್ನಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಪ್ರಯೋಗಿಸುತ್ತಿದ್ದು ವಿಶೇಷವಾಗಿತ್ತು. ಹಿರಿಯ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪರ ಪ್ರಧಾನ ಸಹಯೋಗದಲ್ಲಿ ರಂಗ ಕಲಾವಿದೆ ಸುಧಾ ಮಣೂರು ಅವರ ಪದವಿನ್ಯಾಸದಲ್ಲಿ ಈ ಯಕ್ಷಗಾನ ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!