Sunday, September 22, 2024
Sunday, September 22, 2024

ಕೋವಿಡ್ ಮಾರ್ಗಸೂಚಿಗಳನ್ನು ಗ್ರಾಹಕರು ಪಾಲಿಸುವಂತೆ ಅಂಗಡಿ ಮಾಲೀಕರು ಎಚ್ಚರ ವಹಿಸಬೇಕು: ಜಿಲ್ಲಾಧಿಕಾರಿ

ಕೋವಿಡ್ ಮಾರ್ಗಸೂಚಿಗಳನ್ನು ಗ್ರಾಹಕರು ಪಾಲಿಸುವಂತೆ ಅಂಗಡಿ ಮಾಲೀಕರು ಎಚ್ಚರ ವಹಿಸಬೇಕು: ಜಿಲ್ಲಾಧಿಕಾರಿ

Date:

ಉಡುಪಿ: ಕೋವಿಡ್ ಮಾರ್ಗಸೂಚಿಗಳನ್ನು ಗ್ರಾಹಕರು ಪಾಲಿಸುವಂತೆ ಅಂಗಡಿ ಮುಂಗಟ್ಟುಗಳ ಮುಖ್ಯಸ್ಥರು ಎಚ್ಚರಿಸುವುದರೊಂದಿಗೆ ವ್ಯವಹರಿಸಬೇಕು, ತಪ್ಪಿದಲ್ಲಿ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆಯನ್ನು ನೀಡಿದರು.

ಅವರು ಇಂದು ಮಣಿಪಾಲ್ ನ ಟೈಗರ್ ಸರ್ಕಲ್, ಬಸ್ ಸ್ಟಾಂಡ್, ರಸ್ತೆ ಬದಿಯ ಅಂಗಡಿ ಮುಂಗಟ್ಟು ಸೇರಿದಂತೆ ಮಾಲ್ ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯಾಪಾರಿಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಎಚ್ಚರಿಕೆ ನೀಡುವುದರ ಜೊತೆಗೆ ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟು ಮಾಡುವವರಿಗೆ ದಂಢ ವಿಧಿಸಲು ನಗರಸಭಾ ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದರು.

ಅಂಗಡಿ ಮಾಲೀಕರುಗಳು ತಮ್ಮ ಅಂಗಡಿ ಮುಂಭಾಗ ಗ್ರಾಹಕರು ಸಾಮಾಜಿಕ ಅಂತರ ಕಾಯ್ದಕೊಳ್ಳುವಂತೆ ಸೂಕ್ತ ಮಾರ್ಕಿಂಗ್ ಮಾಡುವುದರೊಂದಿಗೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿಗಾ ವಹಿಸಬೇಕು.

ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂಬ ನಾಮಫಲಕಗಳನ್ನು ಅಳವಡಿಸಬೇಕು. ಒಂದೊಮ್ಮೆ ಕೋವಿಡ್ ಮಾರ್ಗಸೂಚಿ ಪಾಲಿಸದ್ದಿದ್ದಲ್ಲಿ ಅವರೊಂದಿಗೆ ವ್ಯವಹರಿಸಲು ಮುಂದಾಗಬಾರದು ಎಂದರು.

ಮಾಲ್ ಗಳ ಪ್ರವೇಶ ದ್ವಾರದ ಬಳಿ ಥರ್ಮಲ್ ಸ್ಕ್ಯಾನಿಂಗ್ ಮಾಡುವುದರ ಜೊತೆಗೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಿದ್ದರೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು.

ಮಾಲ್ ಒಳಗೆ ಜನದಟ್ಟಣೆಯಾಗದಂತೆ ಎಚ್ಚರ ವಹಿಸಿ ಶೇ. 50 ಕ್ಕಿಂತ ಕಡಿಮೆ ಜನಸಾಂದ್ರತೆ ಇರುವಂತೆ ಕ್ರಮ ವಹಿಸಬೇಕು.

ಒಂದೊಮ್ಮೆ ಇವುಗಳನ್ನು ಉಲ್ಲಂಘಿಸಿದಲ್ಲಿ ಮಾಲ್ ಗಳನ್ನು ಮುಚ್ಚುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಕೋವಿಡ್ ನ ಸರಳ ಮಾರ್ಗಸೂಚಿಗಳಾದ ಸಾಮಾಜಿಕ ಅಂತರ ಕಾಪಾಡುವುದು, ಮುಖಗವಸು ಧರಿಸುವುದು, ಸ್ವಚ್ಚತೆಗೆ ಆದ್ಯತೆ ನೀಡುವುದು ಸೇರಿದಂತೆ ಮತ್ತಿತರ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು, ತಪ್ಪಿದಲ್ಲಿ ಅಂತಹವರಿಂದ ನಿರ್ದಾಕ್ಷಿಣ್ಯವಾಗಿ ದಂಡ ವಸೂಲಿ ಮಾಡಲಾಗುವುದು ಎಂದರು.

ಔಷಧ ವ್ಯಾಪಾರ ಮಳಿಗೆಯಲ್ಲಿ ಮಾಲೀಕರಿಂದ ಕೆಮ್ಮು ಶೀತ ಜ್ವರದ ಔಷಧಿಗಳನ್ನು ವಿತರಿಸುವ ಮಾಹಿತಿಯನ್ನು ಪಡೆದು ಮಾತನಾಡಿ, ಖರೀದಿಸಿದವರ ಮಾಹಿತಿಯ ಪ್ರತಿದಿನದ ವರದಿಗಳನ್ನು ಸೂಕ್ತ ಪ್ರಾಧಿಕಾರಕ್ಕೆ, ಹಿಂದಿನಂತೆ ಕಡ್ಡಾಯವಾಗಿ ನೀಡಬೇಕೆಂದು ಸೂಚನೆ ನೀಡಿದರು.

ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು ಪ್ರತಿನಿತ್ಯ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿದೆಯೆ ಇಲ್ಲವೇ ಎಂಬ ಬಗ್ಗೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದವರಿಂದ ದಂಢ ಸಂಗ್ರಹಿಸಲಾಯಿತು. ನಗರಸಭೆ ಆಯುಕ್ತ ಉದಯ ಶೆಟ್ಟಿ, ನಗರಸಭೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!