Sunday, September 22, 2024
Sunday, September 22, 2024

ಉಡುಪಿಯಲ್ಲಿ ಗಮನ ಸೆಳೆದ ಕೋವಿಡ್ ಜಾಗೃತಿ ಅಭಿಯಾನ

ಉಡುಪಿಯಲ್ಲಿ ಗಮನ ಸೆಳೆದ ಕೋವಿಡ್ ಜಾಗೃತಿ ಅಭಿಯಾನ

Date:

ಉಡುಪಿ: ಕೊರೊನಾ ಮೂರನೇ ಅಲೆಯ ಸೋಂಕು ಸಾರ್ವಜನಿಕ ವಲಯದಲ್ಲಿ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ ಜಾಗ್ರತಿ ಮೂಡಿಸುವ ಅಭಿಯಾನವು ನಗರದಲ್ಲಿ ಇಂದು ನಡೆಯಿತು.

ಕಲ್ಸಂಕ ಸರ್ಕಲ್ ಬಳಿ ಅಭಿಯಾನಕ್ಕೆ ನಗರ ಪೊಲೀಸ್ ಠಾಣೆಯ ಎ.ಎಸ್.ಐ ಹರೀಶ್ ಚಾಲನೆ ನೀಡಿದರು. ಅಭಿಯಾನ ಜಾಥಾ ಸಿಟಿ ಬಸ್ಸು ನಿಲ್ದಾಣ, ಸರ್ವಿಸ್ ಬಸ್ಸು ನಿಲ್ದಾಣ ಹಾಗೂ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು.

ಕೊರೊನಾ ಸೂಕ್ಷ್ಮಾಣುವಿನ ಐದು ಅಡಿಯ ಮಾದರಿಯ ತದ್ರೂಪವನ್ನು ರಚಿಸಲಾಗಿತ್ತು. ರೋಗಾಣು ಕಲಾಕೃತಿಯೊಳಗಿದ್ದು ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ನಗರದ ಪ್ರಮುಖ ಮಾರ್ಗಗಳಲ್ಲಿ ಜಾಗೃತಿ ಮೂಡಿಸಿ ಗಮನ ಸೆಳೆದರು.

ಕೊರೊನಾ ರೋಗಣು ಕಲಾಕೃತಿಯನ್ನು ಕಲಾವಿದರಾದ ಮಹೇಶ್ ಮತ್ತು ಲೊಕೇಶ್ ರಚಿಸಿದ್ದರು. ಅಭಿಯಾನದಲ್ಲಿ ಕೆ. ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು, ರಾಜೇಶ್ ದೇವಾಡಿಗ ಕಾಪು, ಡೇವಿಡ್ ಕುಕ್ಕಿಕಟ್ಟೆ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!