Sunday, September 22, 2024
Sunday, September 22, 2024

ಕಾನೂನು ಕಾಲೇಜುಗಳಿಗೂ ಮಠ ಮಂದಿರಕ್ಕೂ ಸಾಮ್ಯತೆ ಇದೆ: ಶ್ರೀ ಕೃಷ್ಣಾಪುರ ಸ್ವಾಮೀಜಿ

ಕಾನೂನು ಕಾಲೇಜುಗಳಿಗೂ ಮಠ ಮಂದಿರಕ್ಕೂ ಸಾಮ್ಯತೆ ಇದೆ: ಶ್ರೀ ಕೃಷ್ಣಾಪುರ ಸ್ವಾಮೀಜಿ

Date:

ಉಡುಪಿ: ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯಕ್ಕೆ ಶ್ರೀ ಕೃಷ್ಣಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಆಗಮಿಸಿ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರಿಂದ ಗೌರವ ಆತಿಥ್ಯ ಪಡೆದು ಆಶೀರ್ವಚನ ನೀಡಿದರು.

ಮಠ ಮಂದಿರಗಳಲ್ಲಿ ಸ್ವಾಮೀಜಿಯವರು ಸಿದ್ಧಿಗಾಗಿ ತಪಸ್ಸು ಮಾಡುತ್ತಾರೆ. ಅದೇ ರೀತಿ ಕಾನೂನು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ನ್ಯಾಯ ವಿದ್ಯೆಗಾಗಿ ತಪಸ್ಸು ಮಾಡುತ್ತಾರೆ.

ನ್ಯಾಯಾಲಯಗಳಲ್ಲಿ, ಕಾನೂನು ಕಲಿತವರು ತಮ್ಮ ಕಕ್ಷಿದಾರರ ಪರವಾಗಿ ನ್ಯಾಯಾಧೀಶರಿಂದ ಫಲಾಪೇಕ್ಷಿಸಿದಂತೆ ಮಠ ಮಂದಿರದಲ್ಲಿ ಸ್ವಾಮೀಜಿ, ಯತಿವರ್ಯರು ಭಕ್ತರ ಅಹವಾಲುಗಳನ್ನು ಸ್ವೀಕರಿಸಿ ಫಲಾಪೇಕ್ಷೆಗಾಗಿ ದೇವರನ್ನು ಪ್ರಾರ್ಥಿಸುತ್ತಾರೆ. ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಉಡುಪಿ ಶ್ರೀ ಕೃಷ್ಣ ದೇವರು ಅನುಗ್ರಹಿಸಲಿ ಎಂದು ಆಶೀರ್ವದಿಸಿದರು.

ನ್ಯಾಯೇನ ಮಾರ್ಗೇಣ ಮಹೀಂ ಮಹಿಶಾ: ಲೋಕಾ: ಸಮಸ್ತಾ: ಸುಖಿನೋ ಭವಂತು ಭೂಮಿಯನ್ನಾಳುವವರು ನ್ಯಾಯ ಮಾರ್ಗದಿಂದ ನಡೆದರೆ ಲೋಕದ ಎಲ್ಲರೂ ಕೂಡ ಸುಖಿಗಳಾಗಿರುತ್ತಾರೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನಿರ್ಮಲ ಕುಮಾರಿಯವರು ಶ್ರೀಪಾದರನ್ನು ಸ್ವಾಗತಿಸಿ ಗೌರವಿಸಿದರು.

ದೈಹಿಕ ಶಿಕ್ಷಕರಾದ ಪ್ರಕಾಶ್ ರಾವ್ ಡಿ., ಉಪನ್ಯಾಸಕಿ ಜಯಮೋಲ್, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂಪತ್ ಕುಮಾರ್, ಮುರಳೀಧರ ಪೈ, ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು. ಚಿಂತನ್ ಹೆಗ್ಡೆ ವಂದಿಸಿ, ಅಶ್ವಿನಿ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!