Sunday, September 22, 2024
Sunday, September 22, 2024

ಸಾಧಕರನ್ನು ಸಮಾಜ ಗುರುತಿಸುವಂತಾಗಲಿ: ಶ್ರೀಕಾಂತ ಶೆಣೈ

ಸಾಧಕರನ್ನು ಸಮಾಜ ಗುರುತಿಸುವಂತಾಗಲಿ: ಶ್ರೀಕಾಂತ ಶೆಣೈ

Date:

ಕೋಟ: ಸಾಧಕರನ್ನು ಸಮಾಜ ಗುರುತಿಸುವಂತಾಗಬೇಕು, ಆಗ ತಾನೆ ಅವರು ಇನ್ನೊಬ್ಬರಿಗೆ ಮಾದರಿಯಾಗಿ ಸಮಾಜ ಮುಂದೆ ನಿಲ್ಲಲು ಸಾಧ್ಯ. ಕಾರಂತ ಥೀಮ್ ಪಾರ್ಕ್ನಲ್ಲಿ ದತ್ತಿ ಪುರಸ್ಕಾರದ ಮೂಲಕ ಸಾಧಕರನ್ನು ಗುರುತಿಸಿ ಮುಖ್ಯವಾಹಿನಿಗೆ ತರುತ್ತಿರುವುದು ಶ್ಲಾಘನೀಯ ಎಂದು ಸಾಂಸ್ಕೃತಿಕ ಚಿಂತಕ, ಉದ್ಯಮಿ ಶ್ರೀಕಾಂತ್ ಶೆಣೈ ಹೇಳಿದರು.

ಅವರು ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ, ಡಾ. ಕಾರಂತ ಟ್ರಸ್ಟ್ (ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆದ ಯಕ್ಷಗಾನ ವಿಚಾರಗೋಷ್ಠಿ-ಯಕ್ಷಗಾನ ವೈಭವ ಕಾರ್ಯಕ್ರಮ ಒಡ್ಡೋಲಗ-2022(ನೆನಪಿನ ಕಾವಳ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಯಕ್ಷಗಾನ ಭಾಗವತ ಲಂಬೋದರ ಹೆಗಡೆ ಮಾತನಾಡಿ, ಯಕ್ಷಗಾನದ ಪರಂಪರೆ ಮರೆಯದಂತೆ ಯಕ್ಷಗಾನವನ್ನು ಪ್ರಸ್ತುತಪಡಿಸಬೇಕಾಗಿದೆ ಎಂದರು. ಯಕ್ಷಗಾನ ಸಂಘಟಕ ಪ್ರಸಾದ್ ಬಿಲ್ಲವ ಮಾತನಾಡಿ, ಪ್ರೇಕ್ಷಕರನ್ನು ಮನದಲ್ಲಿ ಇರಿಸಿಕೊಂಡು ಅವರ ಅಭಿರುಚಿಗೆ ತಕ್ಕಂತೆ ಯಕ್ಷಗಾನಕ್ಕೆ ಚ್ಯುತಿ ಬರದಂತೆ ಪ್ರದರ್ಶನ ನೀಡಬೇಕು ಎಂದರು.

ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಸಮಾಜ ಸೇವಕ ಸಂತೋಷ್ ಪೂಜಾರಿ ಕದ್ರಿಕಟ್ಟು, ಕಾರಂತ ಪ್ರತಿಷ್ಠಾನದ ಸದಸ್ಯ ಸುಬ್ರಾಯ್ ಆಚಾರ್ಯ ಉಪಸ್ಥಿತರಿದ್ದರು.

ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರಂತ ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!