Friday, September 20, 2024
Friday, September 20, 2024

ಕಿಳಿಂಗಾರು ಸಾಯಿರಾಮ ಭಟ್ ನಿಧನಕ್ಕೆ ಕಲ್ಕೂರ ಸಂತಾಪ

ಕಿಳಿಂಗಾರು ಸಾಯಿರಾಮ ಭಟ್ ನಿಧನಕ್ಕೆ ಕಲ್ಕೂರ ಸಂತಾಪ

Date:

ಉಡುಪಿ: ಬಡವರ ಪಾಲಿಗೆ ಸೇವಾ ದುರಂಧರರೆನಿಸಿದ್ದ ಕಿಳಿಂಗಾರು ಸಾಯಿರಾಮ್ ಭಟ್ ನಿಧನಕ್ಕೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

250ಕ್ಕೂ ಹೆಚ್ಚು ಮಂದಿಗೆ ಮನೆ ನಿರ್ಮಿಸಿದ ದಾನಿ, ನೂರಾರು ಮನೆಗಳಿಗೆ ಕುಡಿಯುವ ನೀರು, 50ಕ್ಕೂ ಅಧಿಕ ಮಂದಿಗೆ ರಿಕ್ಷಾ ನೀಡುವ ಮೂಲಕ ಅವರ ಬಾಳಿಗೆ ಬೆಳಕಾಗಿದ್ದ ಭಟ್ಟರು ಉಚಿತ ವೈದ್ಯಕೀಯ ಸೇವೆ, ಬಡ ಜನತೆಯ ಕುಟುಂಬದ ಶುಭ ಸಮಾರಂಭ ನೆರವೇರಿಸುವರೇ ಉಚಿತವಾಗಿ ಸಮುದಾಯ ಭವನವನ್ನು ಬಳಸಿಕೊಳ್ಳುವ ಅವಕಾಶ ಸಹಿತ ನೂರಾರು ಜನಹಿತ ಕಾರ್ಯಗಳಿಂದ ಜನಮನ್ನಣೆಗಳಿಸಿದ ಸಾಯಿರಾಮ ಭಟ್‌ರನ್ನು ಕಲ್ಕೂರ ಪ್ರತಿಷ್ಠಾನದ ವತಿಯಿಂದ ಕಲ್ಕೂರ ಜೀವಮಾನ ಸಾಧನಾ ಪ್ರಶಸ್ತಿ, ಭಗವಾನ್ ಸಾಯಿಬಾಬಾ ಸೇವಾ ಪ್ರಶಸ್ತಿ ನೀಡಿ ಗೌರವಿಸಿರುವುದನ್ನು ಪ್ರದೀಪ ಕುಮಾರ ಕಲ್ಕೂರ ಸ್ಮರಿಸಿದ್ದಾರೆ.

ದಿವಂಗತರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಪೊಳಲಿ ನಿತ್ಯಾನಂದ ಕಾರಂತ, ಡಾ. ಎಂ. ಪ್ರಭಾಕರ ಜೋಶಿ, ಶರವು ರಾಘವೇಂದ್ರ ಶಾಸ್ತ್ರಿ, ಎಚ್. ಜನಾರ್ದನ ಹಂದೆ ಮೊದಲಾದವರು ಕಂಬನಿ ಮಿಡಿದಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!