Sunday, September 22, 2024
Sunday, September 22, 2024

ಒಂದೇ ಮತ ಒಂದೇ ಮೌಲ್ಯ ಪ್ರಜಾಪ್ರಭುತ್ವದ ಜೀವಾಳ: ಡಾ. ಗಣನಾಥ ಎಕ್ಕಾರು

ಒಂದೇ ಮತ ಒಂದೇ ಮೌಲ್ಯ ಪ್ರಜಾಪ್ರಭುತ್ವದ ಜೀವಾಳ: ಡಾ. ಗಣನಾಥ ಎಕ್ಕಾರು

Date:

ಉಡುಪಿ: ರಾಜ್ಯ ಚುನಾವಣಾ ಆಯೋಗಗಳ ನಿರ್ದೇಶನದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು, ಒಂದೇ ಮತ ಒಂದೇ ಮೌಲ್ಯ ಪ್ರಜಾಪ್ರಭುತ್ವದ ಜೀವಾಳ. ಮತದಾರರು ತಮ್ಮ ಹಕ್ಕಿನ ಬಗ್ಗೆ ಅರಿವು ಮೂಡಿಸಿಕೊಂಡು ನಿಷ್ಪಕ್ಷಪಾತವಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕು. ಮತದಾರರ ದಿನಾಚರಣೆ ಪಾರದರ್ಶಕ ಮತದಾನದ ಬಗ್ಗೆ ಅರಿವು ಮೂಡಿಸುವ ದಿನ ಎಂದರು.

ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಪ್ರಜಾಪ್ರಭುತ್ವದಲ್ಲಿ ಮತದಾರ ಹಕ್ಕಿನ ಮಹತ್ವವನ್ನು ವಿವರಿಸಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಮಂಜುನಾಥ ಪ್ರಸ್ತಾವಿಕವಾಗಿ ಸ್ವಾಗತಿಸಿ, ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಉಮೇಶ್ ಪೈ ವಂದಿಸಿದರು. ಇತಿಹಾಸ ಎಂ.ಎ. ವಿದ್ಯಾರ್ಥಿನಿ ಅಶ್ವಿಜ ನಿರೂಪಿಸಿದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ತಿಮ್ಮಣ್ಣ ಜಿ. ಭಟ್, ಡಾ. ಉದಯ ಶೆಟ್ಟಿ ಕೆ. ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮುಕ್ತ ಮತ್ತು ಪಾರದರ್ಶಕ ಮತದಾನದ ಬಗ್ಗೆ ಪ್ರತಿಜ್ಞೆಯನ್ನು ಇತಿಹಾಸ ವಿಭಾಗ ರಿಯಾಜ್ ಅಹ್ಮದ್ ಬೋಧಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!