Monday, September 23, 2024
Monday, September 23, 2024

ಗ್ರಾಮ ಒನ್ ಕೇಂದ್ರದಿಂದ ಗ್ರಾಮ ಸ್ವರಾಜ್ಯ ಕನಸು ನನಸು: ಎ.ಡಿ.ಸಿ. ಸದಾಶಿವ ಪ್ರಭು

ಗ್ರಾಮ ಒನ್ ಕೇಂದ್ರದಿಂದ ಗ್ರಾಮ ಸ್ವರಾಜ್ಯ ಕನಸು ನನಸು: ಎ.ಡಿ.ಸಿ. ಸದಾಶಿವ ಪ್ರಭು

Date:

ಕೋಟ: ವಡ್ಡರ್ಸೆ ಗ್ರಾ.ಪಂ. ಕಚೇರಿ ಸಮೀಪ ನೂತನವಾಗಿ ಆರಂಭಗೊಂಡ ಗ್ರಾಮ ಒನ್ ಸೇವಾ ಕೇಂದ್ರಕ್ಕೆ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರಕಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದ್ದು, ಪದವೀಧರ ಯುವ ಜನತೆಗೆ ಕೇಂದ್ರ ನಿರ್ಮಿಸಲು ಅವಕಾಶ ಕಲ್ಪಿಸಿದೆ.

ಇದರ ಮೂಲಕ ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ತೆರಳುವ ಸ್ಥಿತಿ ತಪ್ಪಲಿದ್ದು, ಗ್ರಾಮ ಕೇಂದ್ರದಲ್ಲೇ ಎಲ್ಲಾ ಸೇವೆ ಲಭ್ಯವಾಗಲಿದೆ. ಈ ಮೂಲಕ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ನನಸಾಗಲಿದೆ ಎಂದರು.

ವಡ್ಡರ್ಸೆ ಗ್ರಾ.ಪಂ. ಅಧ್ಯಕ್ಷೆ ಸವಿತಾ ಪ್ರಕಾಶ್ ಆಚಾರ್ಯ, ಗ್ರಾ.ಪಂ. ಸದಸ್ಯ ಕೋಟಿ ಪೂಜಾರಿ, ಚಂದ್ರಶೇಖರ್ ಶೆಟ್ಟಿ, ಹರೀಶ್ ಶೆಟ್ಟಿ, ಭಾಸ್ಕರ್ ಪೂಜಾರಿ, ಪಾರ್ವತಿ ದೇವಾಡಿಗ, ಕೋಟ ಕಂದಾಯ ಅಧಿಕಾರಿ ರಾಜು, ವಿ.ಎ. ವಿಜಯ್, ಸಾಲಿಗ್ರಾಮ ಪ.ಪಂ. ಸದಸ್ಯ ಸಂಜೀವ ದೇವಾಡಿಗ, ವಡ್ಡರ್ಸೆ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮಾಜಿ ಸದಸ್ಯ ರಾಜು ಶ್ರೀಯಾನ್, ಗ್ರಾಮ ಒನ್ ಕೇಂದ್ರದ ಮುಖ್ಯಸ್ಥೆ ಸರೋಜಾ ಜಿ. ಪೂಜಾರಿ, ಜಗದೀಶ್ ಪೂಜಾರಿ, ಸ್ಥಳೀಯರಾದ ಸುದೀಪ್ ವಡ್ಡರ್ಸೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!