Saturday, September 21, 2024
Saturday, September 21, 2024

ದೇವಸ್ಥಾನಗಳ ಆದಾಯದ 10% ಮೊತ್ತವನ್ನು ಗೋಶಾಲೆಗಳ ಅಭಿವೃದ್ಧಿಗೆ ಮೀಸಲಿರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ: ಯಶ್‌ಪಾಲ್ ಸುವರ್ಣ

ದೇವಸ್ಥಾನಗಳ ಆದಾಯದ 10% ಮೊತ್ತವನ್ನು ಗೋಶಾಲೆಗಳ ಅಭಿವೃದ್ಧಿಗೆ ಮೀಸಲಿರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ: ಯಶ್‌ಪಾಲ್ ಸುವರ್ಣ

Date:

ಉಡುಪಿ: ರಾಜ್ಯದಲ್ಲಿ ಗೋ ಸಂರಕ್ಷಣೆಯ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಗೋಶಾಲೆಗಳಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಮುತುವರ್ಜಿ ವಹಿಸಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ 10% ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಈ ಬಾರಿಯ ಬಜೆಟ್‌ನಲ್ಲಿ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಯವರಿಗೆ ಮನವಿ ಸಲ್ಲಿಸಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

ಭಾರತದ ಸಂಸ್ಕೃತಿಯಲ್ಲಿ ಗೋವುಗಳಿಗೆ ಪ್ರಧಾನ
ಪಾತ್ರವಿದೆ. ಹಲವಾರು ಕಾರಣಗಳಿಂದ ಅನಾಥವಾಗುವ ಗೋವುಗಳ ರಕ್ಷಣೆಯ ಸದುದ್ದೇಶದಿಂದ ನಮ್ಮ ರಾಜ್ಯದಲ್ಲಿ ಹಲವಾರು ಗೋಶಾಲೆಗಳು ಕಾರ್ಯನಿರ್ವಹಿಸುತ್ತಿದೆ.

ಈಗಾಗಲೇ ಸರಕಾರ ಗೋ ಸಂರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದರೂ, ಗೋಶಾಲೆಗಳು ಆರ್ಥಿಕವಾಗಿ ತೀರ ಸಂಕಷ್ಟ ಪರಿಸ್ಥಿತಿಯಲ್ಲಿ ಗೋರಕ್ಷಣೆಯ ಸೇವೆಯಲ್ಲಿ ತೊಡಗಿಸಿಕೊಂಡಿದೆ.

ಈಗಾಗಲೇ ಈ ಮಹತ್ವದ ಸೇವಾ ಕಾರ್ಯದಲ್ಲಿ
ತೊಡಗಿಸಿಕೊಂಡಿರುವ ಗೋಶಾಲೆಗಳಿಗೆ ಆರ್ಥಿಕ ಚೈತನ್ಯ ನೀಡುವ ಉದ್ದೇಶದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ 10% ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಆದೇಶ ನೀಡಿದಲ್ಲಿ ಕೋಟ್ಯಾಂತರ ರೂಪಾಯಿ ಅನುದಾನದ ಸಂಗ್ರಹವಾಗಲಿದ್ದು ಈ ಮೂಲಕ ಗೋ ಸಂರಕ್ಷಣೆಯಲ್ಲಿ ನಿರತವಾಗಿರುವ ಗೋಶಾಲೆಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಸರಕಾರ ಪ್ರತಿ ಜಿಲ್ಲೆಗಳಲ್ಲೂ ಗೋಶಾಲೆಗಳನ್ನು ಆರಂಭಿಸುವ ಯೋಜನೆಗೂ ಸಹಕಾರವಾಗಲಿದೆ ಎಂದು ಯಶ್ಪಾಲ್ ಸುವರ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!