Sunday, September 22, 2024
Sunday, September 22, 2024

ನಿಟ್ಟೂರು- ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ನಿಟ್ಟೂರು- ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

Date:

ಉಡುಪಿ: ಚೈಲ್ಡ್ ಲೈನ್-1098 ಉಡುಪಿ ಮತ್ತು ಶ್ರೀಕೃಷ್ಣ ರೋಟರ‍್ಯಾಕ್ಟ್ ಕ್ಲಬ್ ಉಡುಪಿ ಇವರ ಸಹಯೋಗದೊಂದಿಗೆ ನಿಟ್ಟೂರು ಪ್ರೌಢಶಾಲೆಯಲ್ಲಿ ಚೈಲ್ಡ್ ಲೈನ್-1098ರ ಸೇವೆಗಳು, ಮಕ್ಕಳ ರಕ್ಷಣಾ ವ್ಯವಸ್ಥೆಗಳು, ಮಕ್ಕಳ ಹಕ್ಕು ಹಾಗೂ ಕರ್ತವ್ಯಗಳು, ಪೋಕ್ಸೋ ಕಾಯಿದೆ, ಹದಿಹರೆಯದ ಮಕ್ಕಳ ಸಮಸ್ಯೆಗಳು, ವೈಯಕ್ತಿಕ ಸ್ವಚ್ಚತೆ, ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶದ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಚೈಲ್ಡ್ ಲೈನ್-1098 ಉಡುಪಿಯ ಸಹ ನಿರ್ದೇಶಕರಾದ ಗುರುರಾಜ್ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ವೈದ್ಯರಾದ ಅಶ್ವಿನ್ ಅವರು ಅಸುರಕ್ಷಿತ ಮತ್ತು ಸುರಕ್ಷಿತ ಸ್ಪರ್ಶಗಳ ಕುರಿತು ಅರಿವನ್ನು ಮೂಡಿಸಿದರು. ಸಾಮಾಜಿಕ ಜಾಲತಾಣಗಳ‌ ಬಳಕೆಯ ಸಂದರ್ಭದಲ್ಲಿ ಮಕ್ಕಳು ಹೆಚ್ಚು ಜಾಗರೂಕರಾಗಿರಬೇಕೆಂದು ಹೇಳಿದರು.

ಕರಾವಳಿ ಕಾವಲು ಪಡೆ ಮಲ್ಪೆಯ ಎಸ್‌.ಐ ಮುಕ್ತಾಬಾಯಿ ಅವರು ಮಾತನಾಡಿ, ಮಕ್ಕಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸುವ ಸಂದರ್ಭದಲ್ಲಿ ಅಡ್ಡ ದಾರಿಯನ್ನು ತುಳಿಯಬಾರದು.

ಅವಶ್ಯಕತೆಗಿಂತ ಹೆಚ್ಚಿನ ಮೊಬೈಲ್ ಬಳಕೆಯಿಂದಾಗುವ ತೊಂದರೆಗಳ ಕುರಿತು ಮಾಹಿತಿ ನೀಡಿದರು ಹಾಗೂ ಅನಗತ್ಯವಾದ ಸಾಮಾಜಿಕ ಜಾಲತಾಣಗಳ ಕುರಿತಾದ ಚಟುವಟಿಕೆಗಳಲ್ಲಿ ದೂರವಿರುವಂತೆ ತಿಳಿಸಿದರು.

ಕಲಿಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಮಾರಕವಾಗುವಂತಹ ಚಟುವಟಿಕೆಗಳಿಂದ ದೂರವಿರುವಂತೆ ತಿಳಿಸಿ, ಪೋಕ್ಸೋ ಕಾಯಿದೆಯ ಕುರಿತು ಅರಿವನ್ನು ಮೂಡಿಸಿದರು. ಯಾವುದೇ ರೀತಿಯಾದ ಸಮಸ್ಯೆಯಾದಲ್ಲಿ ಮಕ್ಕಳು ಪೊಲೀಸ್ ಅಥವಾ ಚೈಲ್ಡ್ ಲೈನ್-1098ಕ್ಕೆ ಕರೆ ಮಾಡಿ ಸಹಾಯವನ್ನು ಪಡೆಯಲು ತಿಳಿಸಿದರು.

ಚೈಲ್ಡ್ ಲೈನ್-1098 ಉಡುಪಿಯ ಸಿಬ್ಬಂದಿ ನಯನ ಚೈಲ್ಡ್ ಲೈನ್ ಸೇವೆಗಳು, ಮಕ್ಕಳ ಹಕ್ಕು ಹಾಗೂ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು.

ಶ್ರೀಕೃಷ್ಣ ರೋಟರ‍್ಯಾಕ್ಟ್ ಕ್ಲಬ್‌ನ ಅಧ್ಯಕ್ಷೆಯವರಾದ ಮೇಘನಾ ರಾವ್ ಶ್ರೀಕೃಷ್ಣ ರೋಟರ‍್ಯಾಕ್ಟ್ ಕ್ಲಬ್‌ನ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಅನುಸೂಯಾ ಚೈಲ್ಡ್ ಲೈನ್ ಸೇವೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಶಾಲೆಗೆ ಸ್ಯಾನಿಟೈಸರ್, ಪೋಸ್ಟರ್ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಲಾಯಿತು.

ಚೈಲ್ಡ್ ಲೈನ್ – 1098 ಉಡುಪಿಯ ನಿರ್ದೇಶಕರಾದ ರಾಮಚಂದ್ರ ಉಪಾಧ್ಯಾಯ, ಸಹ ನಿರ್ದೇಶಕಿಯವರಾದ ಸುಹಾನಿ ಕಾಮತ್, ಶ್ರೀಕೃಷ್ಣ ರೋಟರ‍್ಯಾಕ್ಟ್ ಕ್ಲಬ್‌ನ ಸದಸ್ಯರು, ಚೈಲ್ಡ್ ಲೈನ್-1098 ಉಡುಪಿಯ ಸಿಬ್ಬಂದಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಚೈಲ್ಡ್ ಲೈನ್-1098 ಉಡುಪಿಯ ಸಿಬ್ಬಂದಿ ರಜನಿ ಕಾರ್ಯಕ್ರಮ ನಿರೂಪಿಸಿದರು. ಚೈಲ್ಡ್ ಲೈನ್-1098 ಉಡುಪಿಯ ಕೇಂದ್ರ ಸಂಯೋಜಕಿ ಜ್ಯೋತಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!