Sunday, September 22, 2024
Sunday, September 22, 2024

ಕಾಪು- ಮಹಾರುದ್ರ ಯಾಗ ಸಂಪನ್ನ 

ಕಾಪು- ಮಹಾರುದ್ರ ಯಾಗ ಸಂಪನ್ನ 

Date:

ಕಾಪು: ಟೀಮ್ ಮೋದಿ ಕಾಪು ವಲಯದ ವತಿಯಿಂದ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ರವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಯೊಂದಿಗೆ ಲೋಕ ಕಲ್ಯಾಣಾರ್ಥದ ಸಂಕಲ್ಪದೊಂದಿಗೆ ಆಯೋಜಿಸಿದ್ದ ಮಹಾರುದ್ರ ಯಾಗ ಮಡುಂಬು‌ ಮಹಾಗಣಪತಿ ದೇವಸ್ಥಾನದಲ್ಲಿ ಸಂಪನ್ನಗೊಂಡಿತು.

ಜ್ಯೋತಿರ್ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ ರವರ ಮಾರ್ಗದರ್ಶನದಲ್ಲಿ, ಪುರೋಹಿತರಾದ ಶ್ರೀವತ್ಸ ಭಟ್ ಹಾಗೂ ಜನಾರ್ಧನ ತಂತ್ರಿ ನೇತೃತ್ವದಲ್ಲಿ ಮಹಾರುದ್ರ ಯಾಗ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ, ಭಾರತದ ಪ್ರಧಾನಿಯಾಗಿ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಸಹಿತ ಇನ್ನಷ್ಟು ಕಾಲ ದೇಶ ಮುನ್ನಡೆಸುವಂತಾಗಲಿ ಹಾಗೂ ಸಮಸ್ತ ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಯೊಂದಿಗೆ ಲೋಕ ಕಲ್ಯಾಣಾರ್ಥವಾಗಿ ಯಾಗವನ್ನು ನಡೆಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಮುಖಂಡರಾದ ಶ್ರೀಕಾಂತ ನಾಯಕ್ ಅಲೆವೂರು, ನಯನ ಗಣೇಶ್, ಸುರೇಶ್ ಶೆಟ್ಟಿ ಗುರ್ಮೆ, ಕೇಸರಿ ಯುವರಾಜ್, ಮಾಲಿನಿ ಶೆಟ್ಟಿ, ಸುಮಾ ಶೆಟ್ಟಿ, ಮಂಜುಳಾ ಪ್ರಸಾದ್, ಟೀಮ್ ಮೋದಿ ಕಾಪು ವಲಯದ ಪ್ರಮುಖರಾದ ಯೋಗೀಶ್ ಪೂಜಾರಿ, ಬಾಲಕೃಷ್ಣ ಕಾಪು, ಅಶ್ವಿನ್, ಲಕ್ಷ್ಮೀಕಾಂತ್, ಸುವಿತ್, ನಾಗೇಶ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!