Saturday, September 21, 2024
Saturday, September 21, 2024

ನೀಟ್ ಎರಡು ಸುತ್ತುಗಳಲ್ಲಿ ಜ್ಞಾನಸುಧಾದ ಒಟ್ಟು 77 ವಿದ್ಯಾರ್ಥಿಗಳು ಎಂಬಿಬಿಎಸ್ಗೆ ಆಯ್ಕೆ

ನೀಟ್ ಎರಡು ಸುತ್ತುಗಳಲ್ಲಿ ಜ್ಞಾನಸುಧಾದ ಒಟ್ಟು 77 ವಿದ್ಯಾರ್ಥಿಗಳು ಎಂಬಿಬಿಎಸ್ಗೆ ಆಯ್ಕೆ

Date:

ಗಣಿತನಗರ: 2021ರ ಸಾಲಿನ ನೀಟ್ ಪರೀಕ್ಷೆಯ ಮೊದಲ ಸುತ್ತಿನ ಪ್ರಕ್ರಿಯೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ 73 ವಿದ್ಯಾರ್ಥಿಗಳು ಎಂಬಿಬಿಎಸ್ ಗೆ ಆಯ್ಕೆಗೊಂಡಿದ್ದು, ಇದೀಗ ನಿನ್ನೆ ಬಂದ ಎರಡನೇ ಸುತ್ತಿನಲ್ಲಿ ಮತ್ತೆ 4 ವಿದ್ಯಾರ್ಥಿಗಳು ಎಂಬಿಬಿಎಸ್ ಗೆ ಆಯ್ಕೆಗೊಂಡಿದ್ದಾರೆ. ಎರಡನೇ ಸುತ್ತಿನ್ ಮುಕ್ತಾಯದಲ್ಲಿ ಜ್ಞಾನಸುಧಾದ ಒಟ್ಟು 77 ವಿದ್ಯಾರ್ಥಿಗಳು ಎಂಬಿಬಿಎಸ್ ಸೇರ್ಪಡೆಗೊಂಡಿದ್ದಾರೆ.

ಕರ್ನಾಟಕದ ಪ್ರತಿಷ್ಟಿತ ಮೆಡಿಕಲ್ ಕಾಲೇಜುಗಳಾದ ಬೆಂಗಳೂರು ಮೆಡಿಕಲ್‌ ಕಾಲೇಜಿಗೆ 5, ಮೈಸೂರು ಮೆಡಿಕಲ್‌ ಕಾಲೇಜಿಗೆ 7, ಹುಬ್ಬಳ್ಳಿಯ ಕರ್ನಾಟಕ ಮೆಡಿಕಲ್‌ ಕಾಲೇಜಿಗೆ 4, ಶಿವಮೊಗ್ಗ ಮೆಡಿಕಲ್‌ ಕಾಲೇಜಿಗೆ 9, ಮಂಗಳೂರು ಕೆಎಂಸಿಗೆ 2 ವಿದ್ಯಾರ್ಥಿಗಳು ಸೇರಿ, ರಾಜ್ಯದ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಸೀಟು ಪಡೆದಿದ್ದಾರೆ.

ರಾಷ್ಟ್ರಮಟ್ಟದಲ್ಲಿ ನಡೆದ ನೀಟ್-2021ರ ಪರೀಕ್ಷೆಯಲ್ಲಿ 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಜ್ಞಾನಸುಧಾದ ಒಟ್ಟು 320 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಸುಕ್ಷಿತ್ ಪಿ.ಎಚ್ 720ರಲ್ಲಿ 685 ಅಂಕ ಗಳಿಸಿ ರಾಷ್ಟ್ರಮಟ್ಟದಲ್ಲಿ 640ನೇ ರ‍್ಯಾಂಕ್ ಗಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ವಿದ್ಯಾರ್ಥಿಗಳ ಸಾಧನೆಯನ್ನು ಹಾಗೂ ಜ್ಞಾನಸುಧಾ ಎಂಟ್ರೆನ್ಸ್ಅಕಾಡೆಮಿಯ ಕಾರ್ಯವೈಖರಿಯನ್ನು ಅಜೆಕಾರು ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಶ್ಲಾಘಿಸಿದ್ದು, ಮುಂದಿನ ದಿನಗಳಲ್ಲಿ ಈ 77 ವಿದ್ಯಾರ್ಥಿಗಳೂ ವೈದ್ಯಕೀಯ ಕ್ಷೇತ್ರಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ ಎಂದು ಹರ್ಷ ವ್ಯಕ್ತಪಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!