Sunday, September 22, 2024
Sunday, September 22, 2024

ಪತಿಯ ಕೊಲೆಗೆ ಪತ್ನಿಯಿಂದಲೇ ಸುಪಾರಿ

ಪತಿಯ ಕೊಲೆಗೆ ಪತ್ನಿಯಿಂದಲೇ ಸುಪಾರಿ

Date:

ಬೆಳಗಾವಿ: ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿ ಮಾರ್ಚ್​ 15 ರಂದು ನಡೆದಿದ್ದ ಉದ್ಯಮಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರಿಗೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಉದ್ಯಮಿಯನ್ನು ಕೊಲೆಗೈಯಲು ಪತ್ನಿ ಹಾಗೂ ಉದ್ಯಮದ ಪಾಲುದಾರರು ಸುಪಾರಿ ಕೊಟ್ಟಿದ್ದರು ಎಂದು ತಿಳಿದುಬಂದಿದೆ.

ಉದ್ಯಮಿ ರಾಜು ದೊಡ್ಡಬೊಮ್ಮನವರ್ (41) ಕೊಲೆಯಾದ ವ್ಯಕ್ತಿ. ಬೆಳಗಾವಿಯ ಮಂಡೋಳಿ ರಸ್ತಯಲ್ಲಿ ಉದ್ಯಮಿಯ ಕೊಲೆ ನಡೆದಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಉದ್ಯಮಿಯ ಎರಡನೇ ಪತ್ನಿ ಕಿರಣ ದೊಡ್ಡಬೊಮ್ಮನವರ್ (26), ಶಶಿಕಾಂತ್ ಶಂಕರಗೌಡ ಹಾಗೂ ಧರ್ಮೇಂದ್ರ ಘಂಟಿ ಎಂದು ಗುರುತಿಸಲಾಗಿದೆ.

ಮೊದಲ ಮದುವೆಯನ್ನು ಮುಚ್ಚಿಟ್ಟು ಕಿರಣ ಜತಗೆ ಕೊಲೆಯಾದ ರಾಜು ಎರಡನೇ ವಿವಾಹವಾಗಿದ್ದರು. ಆದರೆ, ಉದ್ಯಮದಲ್ಲಿ ಬಂದಂತಹ ಲಾಭವನ್ನು ಹೆಂಡತಿಗೆ ಹಾಗೂ ಪಾಲುದಾರರ ಜತೆ ರಾಜು ಹಂಚಿಕೊಳ್ಳುತ್ತಿರಲಿಲ್ಲ ಎಂದು ಆರೋಪಿಸಲಾಗಿದೆ. ರಾಜು ಹಾಗೂ ಪಾಲುದಾರರ ನಡುವೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವೈಮನಸ್ಸು ಇತ್ತು ಎಂದು ಹೇಳಲಾಗುತ್ತಿದೆ.

ಮೂವರು ಸೇರಿ ಉದ್ಯಮಿ ರಾಜು ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಕಿರಣ ಸೇರಿ ಮೂರು ಜನರನ್ನು ಬಂಧಿಸಲಾಗಿದ್ದು ಉಳಿದ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!