Sunday, September 22, 2024
Sunday, September 22, 2024

ಚಲನಚಿತ್ರ ಉದ್ಯಮದಲ್ಲಿ ವಿಫುಲ ಉದ್ಯೋಗವಕಾಶ: ಅಶೋಕ್ ಕಶ್ಯಪ್

ಚಲನಚಿತ್ರ ಉದ್ಯಮದಲ್ಲಿ ವಿಫುಲ ಉದ್ಯೋಗವಕಾಶ: ಅಶೋಕ್ ಕಶ್ಯಪ್

Date:

ಉಡುಪಿ: ಭಾರತದ ಚಲನಚಿತ್ರ ಉದ್ಯಮದಲ್ಲಿ ವಿಫುಲ ಉದ್ಯೋಗವಕಾಶಗಳಿದ್ದು, ಪ್ರತಿ ವರ್ಷ 10 ಸಾವಿರದಿಂದ 20 ಸಾವಿರದವರೆಗೆ ಚಲನಚಿತ್ರ ಕ್ಷೇತ್ರದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳ ಅವಶ್ಯಕತೆಯಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಅಶೋಕ್ ಕಶ್ಯಪ್ ಹೇಳಿದರು.

ಅವರು ಮಣಿಪಾಲದ ಎಮ್.ಐ.ಸಿ ಆಡಿಟೋರಿಯಂ ನಲ್ಲಿ, ಕರ್ನಾಟಕ ಚಲಚಿತ್ರ ಅಕಾಡೆಮಿ ಬೆಂಗಳೂರು , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಷನ್ ಇವರ ಸಹಯೋಗದಲ್ಲಿ ನಡೆದ, 5 ದಿನಗಳ ಚಲನಚಿತ್ರ ನಿರ್ಮಾಣ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

ಹಿಂದೆ ಚಲನಚಿತ್ರ ಉದ್ಯಮದಲ್ಲಿ ಪರಿಣಿತರನ್ನು ತಯಾರುಮಾಡಲು ಹಲವು ವರ್ಷಗಳೇ ಬೇಕಿದ್ದವು ಆದರೆ ಇಂದು ತಾಂತ್ರಿಕತೆ ಮತ್ತು ಈ ಕ್ಷೇತ್ರದಲ್ಲಿ ಅನುಭವ ಹೊಂದಿದ ಪರಿಣಿತರಿಂದ ತರಬೇತಿಗಳು ದೊರೆಯುತ್ತಿರುವುದರಿಂದ ಉತ್ತಮ ಪರಿಣಿತರು ಸೃಷ್ಟಿಯಾಗುತ್ತಿದ್ದಾರೆ.

ಹಲವು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಇದನ್ನು ಒಂದು ಕೋರ್ಸ್ ಆಗಿ ಬೋಧಿಸುತ್ತಿವೆ ಎಂದರು. ಚಲನಚಿತ್ರ ನಿರ್ಮಾಣದಲ್ಲಿ ಅನಿಮೇಶನ್, ಗ್ರಾಫಿಕ್ಸ್, ಉತ್ತಮ
ಗುಣಮಟ್ಟದ ವೀಡಿಯೋ ನಿರ್ದೇಶನ ವಿಭಾಗಗಳಲ್ಲಿ ಹೆಚ್ಚಿನ
ಸಂಖ್ಯೆಯಲ್ಲಿ ಭಾರತೀಯ ತಂತ್ರಜ್ಞರು ಕಾರ್ಯರ್ನಿಹಿಸುತ್ತಿದ್ದು, ಇವರು ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಚಲನಚಿತ್ರ ನಿರ್ಮಾಣದಲ್ಲಿ ಉದ್ಯೋಗ ಮಾಡುತ್ತಿದ್ದಾರೆ.

ಬಹಳಷ್ಟು ವಿದೇಶಿ ಚಲನಚಿತ್ರಗಳ ನಿರ್ದೇಶಕರು ಮತ್ತು ನಿರ್ಮಾಪಕರು ತಮ್ಮ ಚಿತ್ರ ನಿರ್ಮಾಣದ ತಾಂತ್ರಿಕ ಕಾರ್ಯಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಭಾರತದಲ್ಲಿ
ತಯಾರಿಸುತ್ತಿದ್ದಾರೆ.

ಚಲನಚಿತ್ರ ವಿಭಾಗದ ವಿದ್ಯಾರ್ಥಿಗಳು ಚಿತ್ರ ನಿರ್ಮಾಣದ ಕೌಶಲ್ಯಗಳನ್ನು ಅರಿಯುವುದು ಅತ್ಯಂತ ಅಗತ್ಯವಿದೆ ಎಂದರು.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ, ಕರ್ನಾಟಕದ ಎಲ್ಲಾ ಭಾಷೆಗಳ ಹಳೆಯ ಚಲನಚಿತ್ರಗಳನ್ನು ಡಿಜಿಟಲ್ ರೂಪ ಕೂಡುವುದೂ ಸೇರಿದಂತೆ ಅದನ್ನು ಸಂರಕ್ಷಿಸುವ ಕಾರ್ಯ ಮಾಡಲು ಸರಕಾರಕ್ಕೆ ಅನುದಾನ ಕೋರಲಾಗಿದೆ ಮತ್ತು ಕನ್ನಡದಲ್ಲೂ ಸಹ ಓಟಿಟಿ ಆರಂಭಿಸುವುದು ಅಗತ್ಯವಿದೆ.

ರಾಜ್ಯದ ನಾಲ್ಕು ವಿವಿಗಳನ್ನು ಗುರುತಿಸಿ, ಅವುಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ದೊರಕಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಅವರಿಗೆ ಕಾರ್ಯಗಾರಗಳನ್ನು ನಡೆಸಿ, ಇಂಡ್ರಸ್ಟ್ರಿ ತಜ್ಞರಿಂದ ತರಬೇತಿ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಎಂ.ಐಸಿ ಮಣಿಪಾಲದ ನಿರ್ದೇಶಕಿ ಡಾ. ಪದ್ಮಾರಾಣಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಶ್ರೀರಾಜ್ ಗುಡಿ, ಮಣಿಪಾಲ ಪ್ರಸಾರ ವಿಭಾಗದ ಶುಭಾ ಹಾಜರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...
error: Content is protected !!