Sunday, September 22, 2024
Sunday, September 22, 2024

ಸುಪ್ತ ಪ್ರತಿಭೆಯ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ: ಅಶೋಕ್ ಕಾಮತ್

ಸುಪ್ತ ಪ್ರತಿಭೆಯ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ: ಅಶೋಕ್ ಕಾಮತ್

Date:

ಉಡುಪಿ: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳು ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹ ಇದ್ದಲ್ಲಿ ಮಾತ್ರ ಅನಾವರಣಗೊಳ್ಳುತ್ತವೆ.

ಮುಜುಗರ ಮತ್ತು ಕೀಳರಿಮೆಯ ಭ್ರಮೆಯಿಂದ ಹೊರಬಂದರೆ ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ಪ್ರತಿಭೆಯ ಬಗ್ಗೆ ಆತ್ಮವಿಶ್ವಾಸ ಬೆಳೆಯುತ್ತದೆ ಮತ್ತು ಆ ಪ್ರತಿಭೆಯ ವಿಕಾಸ ಸಾಧ್ಯವಾಗುತ್ತದೆ.

ಈ ದಿಸೆಯಲ್ಲಿ ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿ ಎಂದು ಜಿಲ್ಲಾ ಶಿಕ್ಷಕ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ ಅಶೋಕ್ ಕಾಮತ್ ಅಭಿಪ್ರಾಯಪಟ್ಟರು.

ಅವರು ಉಡುಪಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅತಿಥಿಗಳಾಗಿ ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡರು, ಕರೋನಾದ  ಈ ಸಂದರ್ಭದಲ್ಲಿ ಶಾಲೆಯಲ್ಲಿ ಆಟೋಟ, ಸ್ಪರ್ಧೆಗಳು ಇಲ್ಲದೇ ಕೇವಲ ಪಾಠ ಬೋಧನೆಯಿಂದ ವಿದ್ಯಾರ್ಥಿಗಳು ಏಕತಾನತೆಯನ್ನು ಅನುಭವಿಸುತ್ತಿದ್ದರು. ಈ ಶಿಬಿರ ವಿದ್ಯಾರ್ಥಿಗಳಿಗೆ ಹೊಸ ಉತ್ಸಾಹ ತುಂಬಲು ಸಹಕಾರಿಯಾಗಿದೆ ಎಂದು ಹೇಳಿದರು.

ದೈಹಿಕ ಶಿಕ್ಷಕ ವಸಂತ್ ಜೋಗಿ ಮತ್ತು ವೃತ್ತಿ ಶಿಕ್ಷಕಿ ಮಂಜುಳಾ ಸಂಯೋಜಿಸಿದ ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಯೋಗಾ ನರಸಿಂಹಸ್ವಾಮಿ, ದಯಾನಂದ್, ಸುಧಾ ಆಡುಕಳ, ಗಣೇಶ್ ಭಾಗ್ವತ್ ಮತ್ತು ಶಾಲೆಯ ಶಿಕ್ಷಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್, ನಿವೃತ್ತ ಪ್ರಾಂಶುಪಾಲೆಯರಾದ ಹಂಸವತಿ, ತಾರಾದೇವಿ, ಸಾಧಕಿ ಹಳೇ ವಿದ್ಯಾರ್ಥಿನಿ ಸಮತಾ ಸಂವಾದ ನಡೆಸಿ ಶುಭ ಹಾರೈಸಿದರು.

ಎಸ್. ಡಿ. ಎಂ.ಸಿ ಯ ಶೇಖರ್ ಕೋಟ್ಯಾನ್ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಜಯಲಕ್ಷ್ಮೀ ಸ್ವಾಗತಿಸಿದರು. ಶಿಕ್ಷಕಿ ಇಂದಿರಾ ಕಾರ್ಯಕ್ರಮ ನಿರೂಪಿಸಿ, ಶೇಖರ್ ಬೋವಿ ವಂದಿಸಿದರು.

ಅನಿಸಿಕೆ ಹಂಚಿಕೆ ಮತ್ತು ಬಹುಮಾನ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...
error: Content is protected !!