Sunday, September 22, 2024
Sunday, September 22, 2024

ಗುಳ್ಳಾಡಿ: ಡಾ. ಬಿ. ಆರ್. ಅಂಬೇಡ್ಕರ್ 131ನೇ ಜಯಂತಿ ಆಚರಣೆ

ಗುಳ್ಳಾಡಿ: ಡಾ. ಬಿ. ಆರ್. ಅಂಬೇಡ್ಕರ್ 131ನೇ ಜಯಂತಿ ಆಚರಣೆ

Date:

ಕೋಟ: ಡಾ.ಬಿ.ಆರ್.ಅಂಬೇಡ್ಕರ್ ರ 131 ನೇ ಜನ್ಮದಿನವನ್ನು ಬೇಳೂರು ಗ್ರಾಮದ ಗುಳ್ಳಾಡಿಯ ಸಮುದಾಯ ಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಅಂಬೇಡ್ಕರ್ ರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಲಾಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಶೇಷ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಬೇಳೂರಿನ ಉಪಾಧ್ಯಕ್ಷರಾದ ಜಯಶೀಲ ಶೆಟ್ಟಿ ಮಾತನಾಡಿ, ಯುವಜನತೆ ಸಂಘಟಿತರಾಗಬೇಕು ಮತ್ತು ಮುಖ್ಯವಾಹಿನಿಗೆ ಬರುವಂತೆ ತಿಳಿಸಿದರು.

ದಲಿತ ಸಂಘರ್ಷ ಸಮಿತಿಯ ಕೋಟ ಹೋಬಳಿ ಶಾಖೆಯ ಪ್ರದಾನ ಕಾರ್ಯದರ್ಶಿಗಳಾದ ರಾಜಶೇಖರ ಬತ್ತಡ ರವರು ಮಾತನಾಡಿ, ಸಬಲ ರಾಷ್ಟ್ರಕ್ಕೆ ಅಂಬೇಡ್ಕರ್ ಅವರು ತಿಳಿಸಿದ ಶಿಕ್ಷಣದ ಅನಿವಾರ್ಯತೆ ಹಾಗೂ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯೆ ಮುಕ್ತ ರಾಘವೇಂದ್ರ, ಸಾಮಾಜಿಕ ಕಾರ್ಯಕರ್ತ ಸತೀಶ್ ಶೆಟ್ಟಿ, ಸಿ.ಎ. ಬ್ಯಾಂಕ್ ಕೋಟ ಸಿಬ್ಬಂದಿ ವಾಸುದೇವ ಕೆ.ಆರ್ ಹಾಗೂ ಮೀನುಗಾರಿಕಾ ಮಹಾವಿದ್ಯಾಲಯ ಮಂಗಳೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಗಜೇಂದ್ರ, ಸುಧೀರ್ ಗುಳ್ಳಾಡಿ ಮುಂತಾದವರು ಉಪಸ್ಥಿತರಿದ್ದರು.

ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ನಾಗರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!