Friday, September 20, 2024
Friday, September 20, 2024

ಎಸ್ .ಆರ್ ವಿಜಯಶಂಕರ್ ಅವರಿಗೆ ಅಕಲಂಕ ಪ್ರಶಸ್ತಿ

ಎಸ್ .ಆರ್ ವಿಜಯಶಂಕರ್ ಅವರಿಗೆ ಅಕಲಂಕ ಪ್ರಶಸ್ತಿ

Date:

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯಿಂದ ದಿವಂಗತ ಡಾ. ಉಪ್ಪಂಗಳ ರಾಮಭಟ್ಟ ಅವರ ಹೆಸರಿನ ದತ್ತಿ ನಿಧಿಯಿಂದ ನೀಡುವ ‘ಅಕಲಂಕ ಪ್ರಶಸ್ತಿಗೆ ‘ ಕನ್ನಡದ ಪ್ರಸಿದ್ಧ ಅಂಕಣಕಾರರಾಗಿರುವ ಎಸ್.ಆರ್ ವಿಜಯಶಂಕರ್ ಅವರನ್ನು ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ನೀಲಾವರ ಅಡಿಗರು ಆಯ್ಕೆ ಮಾಡಿದ್ದಾರೆ

ಕನ್ನಡದ ಪ್ರಸಿದ್ಧ ಪತ್ರಿಕೆಗಳಲ್ಲಿ ಅಂಕಣ ಬರಹಗಾರರಾಗಿ, ಹಲವಾರು ಅಮೂಲ್ಯವಾದ ವಿಮರ್ಶಾ ಕೃತಿಗಳನ್ನು ಇವರು ಬರೆದಿದ್ದು, ಪ್ರಸ್ತುತ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾಂತರ ಕೇಂದ್ರದ ಗೌರವ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನವು ಇದೇ ಬರುವ ಮೇ ತಿಂಗಳಲ್ಲಿ ಉಡುಪಿಯಲ್ಲಿ ನಡೆಯಲಿದ್ದು, ಪ್ರಶಸ್ತಿ ಪತ್ರ, ಫಲಕ ಹಾಗೂ ರೂ. 10,000 ಗೌರವಧನ ಒಳಗೊಂಡಿರುತ್ತದೆ ಎಂದು ಜಿಲ್ಲಾ ಕಸಾಪ ಗೌ.ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಮತ್ತು ನರೇಂದ್ರ ಕುಮಾರ್ ಕೋಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!