Friday, September 20, 2024
Friday, September 20, 2024

ಸರ್ಕಾರಿ ಕೆಲಸಗಳಲ್ಲಿ ಕುಟುಂಬ ಸದಸ್ಯರ ಹಸ್ತಕ್ಷೇಪ ಆಗದಂತೆ ಎಚ್ಚರ ವಹಿಸಿ: ಸಿಎಂ ಯೋಗಿ

ಸರ್ಕಾರಿ ಕೆಲಸಗಳಲ್ಲಿ ಕುಟುಂಬ ಸದಸ್ಯರ ಹಸ್ತಕ್ಷೇಪ ಆಗದಂತೆ ಎಚ್ಚರ ವಹಿಸಿ: ಸಿಎಂ ಯೋಗಿ

Date:

ಲಕ್ನೌ: ಸರ್ಕಾರಿ ಕೆಲಸಗಳಲ್ಲಿ ಕುಟುಂಬ ಸದಸ್ಯರ ಹಸ್ತಕ್ಷೇಪ ಆಗದಂತೆ ಎಲ್ಲ ಸಚಿವರು ನಿಗಾ ವಹಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ.

ಇಂದು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸರ್ಕಾರದ ಕಾರ್ಯಚಟುವಟಿಕೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲು ಉನ್ನತ ಮಟ್ಟದ ಸಭೆಯನ್ನು ನಡೆಸಿದರು.

ನಂತರ ಮಾತನಾಡಿದ ಅವರು, ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಸಾರ್ವಜನಿಕ ಪ್ರತಿನಿಧಿಗಳ ನಡವಳಿಕೆ ಬಹಳ ಮುಖ್ಯ.
ಎಲ್ಲಾ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಮುಂದಿನ ಮೂರು ತಿಂಗಳ ಅವಧಿಯಲ್ಲಿ ತಮ್ಮ ಮತ್ತು ತಮ್ಮ ಕುಟುಂಬ ಸದಸ್ಯರ ಎಲ್ಲಾ ಚರ ಮತ್ತು ಸ್ಥಿರ ಆಸ್ತಿಗಳ ಸಾರ್ವಜನಿಕ ಘೋಷಣೆ ಮಾಡಬೇಕು.

ಎಲ್ಲಾ ಸರಕಾರಿ ನೌಕರರು ತಮ್ಮ ಮತ್ತು ಕುಟುಂಬದ ಸದಸ್ಯರ ಎಲ್ಲಾ ಚರ ಮತ್ತು ಸ್ಥಿರ ಆಸ್ತಿಗಳ ಘೋಷಣೆಯನ್ನು ಮಾಡಬೇಕು. ಈ ವಿವರಗಳನ್ನು ಸಾರ್ವಜನಿಕರ ಅವಲೋಕನಕ್ಕಾಗಿ ಆನ್‌ಲೈನ್ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕು. ಸೋಮವಾರ ಮತ್ತು ಮಂಗಳವಾರ ರಾಜ್ಯ ರಾಜಧಾನಿ ಲಕ್ನೋದಲ್ಲಿಯೇ ಇರುವಂತೆ ಮುಖ್ಯಮಂತ್ರಿ ಎಲ್ಲಾ ಸಚಿವರಿಗೆ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!