Saturday, September 21, 2024
Saturday, September 21, 2024

ಕ್ಲಾಕ್ ಟವರ್ ಪರಿಸರ ಸಮಸ್ಯೆಗಳ ಆಗರ!

ಕ್ಲಾಕ್ ಟವರ್ ಪರಿಸರ ಸಮಸ್ಯೆಗಳ ಆಗರ!

Date:

ಉಡುಪಿ: ಸರ್ವಿಸ್ ಬಸ್ಸು ನಿಲ್ದಾಣದ ಬಳಿಯ ಗಡಿಯಾರ ಗೋಪುರ (ಕ್ಲಾಕ್ ಟವರ್) ಪರಿಸರದಲ್ಲಿ ಉದ್ಭವವಾಗಿರುವ ಸಮಸ್ಯೆಗಳನ್ನು ನಗರಾಡಳಿತ ಸುವ್ಯಸ್ಥೆಗೊಳಿಸುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.

ಗಡಿಯಾರ ಗೋಪುರದ ಬಳಿ ಸಾರ್ವಜನಿಕ ಕುಡಿಯುವ ನೀರಿನ ನಳ ಇದ್ದು, ಅದು ಹಾಳು ಬಿದ್ದು ವರ್ಷವು ಸಂದಿದೆ. ನೀರು ತಂಪಾಗಿಸುವ ಶೀತಲೀಕೃತ ಯಂತ್ರವು ಹಾಳಾಗಿ ಜಂಗು ಹಿಡಿದುಕೊಂಡಿದೆ. ಯಂತ್ರ ರಕ್ಷಿಸಿಟ್ಟಿರುವ ಕೊಠಡಿಯು ಕುಡುಕರ ಶೌಚಾಲಯವಾಗಿ ಮಾರ್ಪಟ್ಟಿದೆ. ಬಿಸಿಲಿನ ತಾಪಮಾನ ಏರುಗತಿಯಲ್ಲಿದ್ದು, ಪ್ರಯಾಣಿಕರು, ಯಾತ್ರಾರ್ಥಿಗಳು, ಪ್ರವಾಸಿಗರು ಕುಡಿಯುವ ನೀರಿಗಾಗಿ ಹುಡುಕಾಟ ನಡೆಸಬೇಕಾದ ಪರಿಸ್ಥಿತಿ ಇಲ್ಲಿ ಎದುರಾಗಿದೆ.

ಗಡಿಯಾರ ಗೋಪುರದ ತಳಭಾಗದಲ್ಲಿ ಗಾಂಧಿ ಪ್ರತಿಮೆ ಇದ್ದು ಅದರ ತಳದಲ್ಲಿ ಅಮೇಲೆರಿದ ಕುಡುಕರು ನಿದ್ರಿಸುತ್ತಿರುತ್ತಾರೆ. ಪರಿಸರದಲ್ಲಿ ಕಸ ತ್ಯಾಜ್ಯಗಳ ರಾಶಿ ಬಿದ್ದುಕೊಂಡಿದ್ದು ಪರಿಸರದಲ್ಲಿ ಗಬ್ಬು ವಾಸನೆ ಹರಡಿದೆ. ಗಡಿಯಾರ ಗೋಪುರದ ಸುತ್ತಲು ಅಳವಡಿಸಿರುವ ಆವರಣ ಬೇಲಿಯನ್ನು ಕಿಡಿಗೇಡಿಗಳು ಘಾಸಿಗೊಳಿಸಿ, ಕಲ್ಲು ಕಂಬಗಳನ್ನು ಉರುಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!