Sunday, September 22, 2024
Sunday, September 22, 2024

ಸಮಕಾಲೀನ ಸವಾಲುಗಳು ಸಂಕೀರ್ಣವಾಗಿದೆ: ಡಾ. ಶ್ರೀಪಾದ ಭಟ್

ಸಮಕಾಲೀನ ಸವಾಲುಗಳು ಸಂಕೀರ್ಣವಾಗಿದೆ: ಡಾ. ಶ್ರೀಪಾದ ಭಟ್

Date:

ಮಲ್ಪೆ: ನಮ್ಮ ಸಮಕಾಲೀನ ಸವಾಲುಗಳು ಅತಿ ಸಂಕೀರ್ಣವಾಗಿದೆ. ನಮ್ಮ ಇಚ್ಛೆಗಳನ್ನು ನಿರ್ಧರಿಸುವವರು ನಾವಲ್ಲ. ಯಾವುದೋ ಬೇರೆ ವ್ಯವಸ್ಥೆ ಅದನ್ನು ನಿರ್ಧರಿಸುತ್ತದೆ, ಹಾಗೂ ನಮ್ಮ ಶಿಕ್ಷಣ ವ್ಯವಸ್ಥೆಯು ನಮ್ಮಲ್ಲಿ ಶ್ರೇಷ್ಠತೆಯ ವ್ಯಸನವನ್ನು ಉಂಟು ಮಾಡುವುದು ಈಗ ನಮ್ಮ ಮುಂದಿರುವ ಬಹುದೊಡ್ಡ ಸವಾಲುಗಳು ಎಂದು ಖ್ಯಾತ ರಂಗಕರ್ಮಿ ಡಾ. ಶ್ರೀಪಾದ್ ಭಟ್ ಹೇಳಿದರು.

ಅವರು ಉಡುಪಿ ಜಿಲ್ಲೆ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಇಂದು ಕಾಲೇಜು ಸಭಾಂಗಣದಲ್ಲಿ ನಡೆದ ದಿ. ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ‘ಸಮಕಾಲೀನ ಸವಾಲುಗಳು’ ಎಂಬ ದತ್ತಿ ಉಪನ್ಯಾಸದಲ್ಲಿ ಮಾತನಾಡುತ್ತಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರು ಆಶಯ ನುಡಿಗಳನ್ನು ಆಡಿದರು. ಉಡುಪಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವಿರಾಜ್ ಎಚ್.ಪಿ. ಯವರು ದತ್ತಿ ಉಪನ್ಯಾಸದ ಮಹತ್ವವನ್ನು ವಿವರಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ದತ್ತಿ ದಾನಿಗಳ ಕುಟುಂಬದ ಭವಾನಿ ವಿ. ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಜಯಪ್ರಕಾಶ್ ಶೆಟ್ಟಿ ಸ್ವಾಗತಿಸಿ, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ಎಚ್.ಕೆ. ವೆಂಕಟೇಶ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!