Saturday, September 21, 2024
Saturday, September 21, 2024

ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು- ಮಣ್ಣು ಉಳಿಸಿ ಅಭಿಯಾನ

ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು- ಮಣ್ಣು ಉಳಿಸಿ ಅಭಿಯಾನ

Date:

ಕುಂದಾಪುರ: ಮಣ್ಣಿನ ನೈಸರ್ಗಿಕ ಗುಣಲಕ್ಷಣಗಳು ಹಾಗೂ ಸ್ವರೂಪಗಳು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಕೃತಕ ರಾಸಾಯನಿಕ ಗೊಬ್ಬರಗಳ ಬಳಕೆ ಹಾಗೂ ವಿಷಪೂರಿತ ತ್ಯಾಜ್ಯದಿಂದಾಗಿ ಮಣ್ಣಿನ ಮಾಲಿನ್ಯ ಹೆಚ್ಚುತ್ತಿರುವುದು ಆತಂಕಕಾರಿಯಾದ ವಿಷಯ ಎಂದು ಇಶಾ ಫೌಂಡೇಶನ್ ಕೊಯಮುತ್ತೂರು ಇದರ ಸ್ವಯಂ ಸೇವಕರಾದ ಬಿ.ಎನ್. ವೆಂಕಟೇಶ್‌ ಹೇಳಿದರು.

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ಇಶಾ ಫೌಂಡೇಶನ್ ಆಯೋಜಿಸಿದ ಮಣ್ಣು ಉಳಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ತನ್ನ ಮೂಲ ಸತ್ವವನ್ನು ಕಳೆದುಕೊಳ್ಳುತ್ತಿರುವ ಮಣ್ಣನ್ನು ರಕ್ಷಿಸುವುದರ ಜೊತೆಗೆ ಭವಿಷ್ಯದ ದಿನಗಳಲ್ಲಿ ಮಣ್ಣಿನ ಫಲವತ್ತತೆಯನ್ನು ನೈಸರ್ಗಿಕವಾಗಿ ಹೆಚ್ಚಿಸುವುದು ನಮ್ಮೆಲ್ಲರ ಕರ್ತವ್ಯ.

ಆ ಹಿನ್ನೆಲೆಯಲ್ಲಿ ಇಶಾ ಫೌಂಡೇಶನ್ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ರವರ ಈ ಮಣ್ಣು ಉಳಿಸಿ ಜಾಗತಿಕ ಅಭಿಯಾನಕ್ಕೆ ನಾವೆಲ್ಲರೂ ಕೈ ಜೋಡಿಸಬೇಕೆಂದು ಅವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಎನ್.ಎಸ್.ಎಸ್. ಸ್ವಯಂ ಸೇವಕಿ ಶಬರಿ ಪ್ರಾರ್ಥನೆಗೈದರು. ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿ ನಾಯಕಿ ಅನುಷಾ ನಿರೂಪಿಸಿದರು.

ಇಶಾ ಫೌಂಡೇಶನ್ ಕೊಯಮುತ್ತೂರು ಇದರ ಸ್ವಯಂ ಸೇವಕರಾದ ನೇಹಾ, ಪ್ರಖ್ಯಾತ್, ವಿಶಾಲ್, ಪ್ರಸನ್ನ, ಪ್ರವೀಣ್ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!