Friday, September 20, 2024
Friday, September 20, 2024

ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಗೆ ಗೌರವಾರ್ಪಣೆ

ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಗೆ ಗೌರವಾರ್ಪಣೆ

Date:

ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ| ನಲ್ಲೂರು ಪ್ರಸಾದ್ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಅವರನ್ನು ಕಲ್ಕೂರ ಪ್ರತಿಷ್ಠಾನದಿಂದ ಗೌರವಿಸಲಾಯಿತು. ಈ ಸಂದರ್ಭ ಪಠ್ಯಪುಸ್ತಕಗಳ ಕುರಿತು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತಾಗಿ ಸಂವಾದ ನಡೆಸಲಾಯಿತು.

ರಾಷ್ಟ್ರೀಯ ಭಾವೈಕ್ಯತೆಯನ್ನು ಕಾಪಾಡಿಕೊಂಡು ಇತಿಹಾಸ, ವಿಜ್ಞಾನ, ತಂತ್ರಜ್ಞಾನ, ಕೃಷಿ, ಸಂಸ್ಕೃತಿ ಹೀಗೆ ಬಹುನೆಲೆಗಳನ್ನೊಳಗೊಂಡ ಭಾಷಾ ಪ್ರೌಢಿಮೆಯ ಜ್ಞಾನವನ್ನು ಬೆಳೆಸಬಲ್ಲ ಸಮಗ್ರ ಶಿಕ್ಷಣ ಮಕ್ಕಳಿಗೆ ಲಭಿಸಬೇಕಾದುದು ಇಂದಿನ ಅನಿವಾರ್ಯತೆಯಾಗಿದೆ ಎಂದು ನಲ್ಲೂರು ಪ್ರಸಾದ್ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಸರ್ವ ಧರ್ಮ ವಿಚಾರಧಾರೆಗಳನ್ನು ಒಳಗೊಂಡಂತೆ ಪರಿಸರ, ಸಂಸ್ಕೃತಿ, ಇತಿಹಾಸ ಸಹಿತ ಪ್ರಾಪಂಚಿಕ ಜ್ಞಾನ ನೀಡಬಲ್ಲ ಪಠ್ಯಗಳುಳ್ಳ ರಾಷ್ಟ್ರೀಯ ಶಿಕ್ಷಣ ನೀತಿ ರೂಪುಗೊಳ್ಳಲಿ ಎಂದರು.

ಚಿತ್ರದುರ್ಗ ಮಠದ ಶ್ರೀ ವಿಜಯಾನಂದ ಸ್ವಾಮೀಜಿ, ಜಯ ಬಸವ ತಪೋವನ, ಚಿಕ್ಕಮಗಳೂರಿನ ಜಯ ಬಸವಾನಂದ ಸ್ವಾಮೀಜಿ, ಸರ್ವ ಧರ್ಮ ಸಮನ್ವಯ ಸಮಿತಿಯ ಅಧ್ಯಕ್ಷ ಮೌಶಿರ್ ಅಹಮದ್ ಸಾಮಣಿಗೆ, ಕರ್ನಾಟಕ ರಕ್ಷಣಾ ವೇದಿಕೆಯ ರಾಝಿಕ್ ಆತೂರು, ಶಾಹುಲ್ ಖಾಸಿಮ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಹಿರಿಯ ಯಕ್ಷಗಾನ ಪ್ರಸಂಗ ಕರ್ತ ಅರ್ಥದಾರಿ ನಿತ್ಯಾನಂದ ಕಾರಂತ ಪೊಳಲಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!