Monday, September 23, 2024
Monday, September 23, 2024

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು- ಪ್ರತಿಭಾ ದಿನಾಚರಣೆ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು- ಪ್ರತಿಭಾ ದಿನಾಚರಣೆ

Date:

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ೨೦೨೧-೨೨ನೇ ಸಾಲಿನ ಪ್ರತಿಭಾ ಪ್ರದರ್ಶನ ದಿನಾಚರಣೆ ನಡೆಯಿತು. ಕಾಲೇಜಿನ ಅಂತರ್-ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ೧೪ ತಂಡಗಳು ಭಾಗವಹಿಸಿದ್ದವು. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ಕಾರ್ಕಳದ ಶಿಕ್ಷಕಿ, ನೃತ್ಯ ನಿರೂಪಕಿ ವಂದನಾ ರೈ ಮಾತನಾಡಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಶುಭಹಾರೈಸಿದರು. ಭಾಗವಹಿಸಿದ ಎಲ್ಲಾ ತಂಡಗಳು ತಮ್ಮ ತಮ್ಮ ಪ್ರತಿಭೆಗಳನ್ನು ಬಹಳ ಅರ್ಥಪೂರ್ಣವಾಗಿ ಅನಾವರಣಗೊಳಿಸಿರುವುದನ್ನು ಶ್ಲಾಘಿಸಿದರು.

ತೀರ್ಪುಗಾರರಾಗಿ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಕುಂದಾಪುರ ಕಛೇರಿ ಅಧೀಕ್ಷಕ ರಮೇಶ್ ಕುಲಾಲ್, ಆಲೂರು ಶಾಲೆಯ ಸಹಶಿಕ್ಷಕ ಉದಯ ಶೆಟ್ಟಿಯವರು ತೀರ್ಪುಗಾರಿಕೆಯ ನೆಲೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಸಂಯೋಜಕರಾದ ಉಪನ್ಯಾಸಕರಾದ ರಕ್ಷಿತ್ ರಾವ್, ಶುಭಾ ಅಡಿಗ, ರೇವತಿ ಖಾರ್ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ದ್ವಿತೀಯ ಬಿ.ಕಾಂ. ಸಿ. ವಿಭಾಗ, ದ್ವಿತೀಯ ಸ್ಥಾನವನ್ನು ದ್ವಿತೀಯ ಬಿ.ಕಾಂ. ಬಿ. ವಿಭಾಗ, ತೃತೀಯ ಸ್ಥಾನವನ್ನು ಪ್ರಥಮ ಬಿ.ಕಾಂ. ಸಿ. ವಿಭಾಗ ಪಡೆಯಿತು.

ಉತ್ತಮ ಸಮೂಹ ಪ್ರದರ್ಶನ ಪ್ರಶಸ್ತಿಯನ್ನು ಪ್ರಥಮ ಬಿ.ಕಾಂ. ಎ. ವಿಭಾಗ ಹಾಗೂ ಉತ್ತಮ ನಿರೂಪಕ ಪ್ರಶಸ್ತಿಯನ್ನು ದ್ವಿತೀಯ ಬಿ.ಸಿ.ಎ. ಆರಾಧ್ಯ, ಉತ್ತಮ ವೈಯಕ್ತಿಕ ಪ್ರತಿಭೆ ಬಿ.ಎಸ್ಸಿ. ವಿಭಾಗದ ಲಕ್ಷ್ಮೀಕಾಂತ್ ಇವರು ಪಡೆದಿರುತ್ತಾರೆ. ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೊವಾಡಿ ಸ್ವಾಗತಿಸಿ, ಉಪನ್ಯಾಸಕಿ ದೀಪಿಕಾ ರಾಘವೇಂದ್ರ ವಿಜೇತರ ಪಟ್ಟಿಯನ್ನು ವಾಚಿಸಿದರು, ಉಪನ್ಯಾಸಕಿ ಪೃಥ್ವೀಶ್ರೀ ಜಿ. ಶೆಟ್ಟಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...
error: Content is protected !!